ಸ್ಯಾಂಡಲ್ವುಡ್ ಕಿಂಗ್ ಶಿವರಾಜ್ಕುಮಾರ್ ಸದ್ಯ ಅನಾರೋಗ್ಯದ ಕಾರಣ ಹೆಚ್ಚುವರಿ ಶಸ್ತ್ರಚಿಕಿತ್ಸೆಗೆಂದು ಅಮೆರಿಕಾಗೆ ತೆರಳಿದ್ದಾರೆ. ಈ ಸುದ್ದಿ ಶಿವಣ್ಣ ಅಭಿಮಾನಿಗಳಿಗೆ ಬೇಸರವನ್ನುಂಟುಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ʼಶಿವಣ್ಣ ಬೇಗ ಹುಷಾರಾಗಿ ಬನ್ನಿʼ ಎಂದು ಬರೆದುಕೊಳ್ಳುತ್ತಿದ್ದಾರೆ.
ಹೀಗೆ ಒಂದೆಡೆ ಶಿವಣ್ಣ ಕುರಿತಾದ ಈ ಸುದ್ದಿ ಅಭಿಮಾನಿಗಳಲ್ಲಿ ಬೇಸರವನ್ನುಂಟುಮಾಡಿದ್ದರೆ, ಮತ್ತೊಂದೆಡೆ ಇಲ್ಲೊಂದು ಚಿತ್ರತಂಡ ಶಿವಣ್ಣನಿಗೆ ತಾವು ನಿರ್ಮಿಸಲು ತಯಾರಾಗಿರುವ ಸಿನಿಮಾವನ್ನು ಅನೌನ್ಸ್ ಮಾಡಿದೆ. ಈ ಮೂಲಕ ಶಿವಣ್ಣ ಅಭಿಮಾನಿಗಳಿಗೆ ಬೇಸರದ ನಡುವೆ ಖುಷಿ ತಂದಿದೆ. ಚಿತ್ರಕ್ಕೆ ʼಎಂಬಿʼ ಎಂದು ಶೀರ್ಷಿಕೆ ಇಡಲಾಗಿದೆ.
ಮುಂಬೈ ಮೂಲದ ‘ಆಡ್-ಒನ್ ಫಿಲ್ಮ್ಸ್’ ಸಂಸ್ಥೆಯ ಮೂಲಕ ‘ಎಂಬಿ’ ಸಿನಿಮಾ ನಿರ್ಮಾಣ ಆಗಲಿದೆ. ಮನೋಜ್ ಬನೋಡೆ ಮತ್ತು ಖೇಮ್ ಚಂದ್ ಖಡ್ಗಿ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ವಿಜಯಕಾಂತ್ ನಟನೆಯ ಯಶಸ್ವಿ ‘ವಲ್ಲರಸು’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದ ಎನ್. ಮಹಾರಾಜನ್ ಅವರು ಈಗ ‘ಎಂಬಿ’ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ.
ಇಲ್ಲಿಯವರೆಗೆ 3 ತಮಿಳು ಮತ್ತು ಸನ್ನಿ ಡಿಯೋಲ್ ನಟನೆಯ ಹಿಂದಿ ಸಿನಿಮಾವೊಂದನ್ನು ನಿರ್ದೇಶನ ಮಾಡಿರುವ ಮಹಾರಾಜನ್ ಅವರು ‘ಎಂಬಿ’ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ‘ಆಡ್ – ಒನ್ ಫಿಲ್ಮ್ಸ್’ ಸಂಸ್ಥೆಯ ವತಿಯಿಂದ ಅನೇಕ ದೊಡ್ಡದೊಡ್ಡ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿರುವ ಮನೋಜ್ ಬನೋಡೆ ಮತ್ತು ಖೇಮ್ ಚಂದ್ ಖಡ್ಗಿ ಅವರು ಈಗ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


