ಬೆಳಗಾವಿ: ಗುಣಮಟ್ಟದ ವಿದ್ಯುತ್ ಪೂರೈಕೆಗೆ ಪೂರಕವಾಗಿ ರಾಜ್ಯದಲ್ಲಿ ಹೆಚ್ಚುವರಿಯಾಗಿ 440 ಉಪಸ್ಥಾವರಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಯೋಜನೆ ಸಿದ್ಧ ಪಡಿಸಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ವಿಧಾನಸಭೆಯ ಪ್ರಶ್ನೊ?ತ್ತರದ ಅವಧಿಯಲ್ಲಿ ಬಂಗಾರಪೇಟೆ ಕ್ಷೇತ್ರದ ಎಸ್.ಎನ್.ನಾರಾಯಣಸ್ವಾಮಿ, ತಮ ಕ್ಷೇತ್ರದಲ್ಲಿ ವಿದ್ಯುತ್ ವೋಲ್ಟೇಜ್ ಸಮಸ್ಯೆ ಹೆಚ್ಚಾಗಿದೆ. ಕೃಷಿ ಪಂಪ್ ಸೆಟ್ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ.
ಜೊತೆಗೆ ಕೆಲವು ಪ್ರದೇಶಗಳಿಗೆ ಉಪಸ್ಥಾವರಗಳು ಮಂಜೂರಾಗಿವೆ. ಆದರೆ ಸಚಿವರು ನೀಡಿರುವ ಉತ್ತರದಲ್ಲಿ ಯಾವುದೇ ಉಪಸ್ಥಾವರಗಳು ಮಂಜೂರಾಗಿಲ್ಲ ಎಂದು ಹೇಳಿದ್ದಾರೆ. ಇದು ತಮಗೆ ಆಘಾತ ಉಂಟು ಮಾಡಿದೆ ಎಂದು ಹೇಳಿದರು.
ಸಚಿವ ಕೆ.ಜೆ.ಜಾರ್ಜ್ ಉತ್ತರ ನೀಡಿ, ಬಂಗಾರಪೇಟೆ ಕ್ಷೇತ್ರದಲ್ಲಿ ಕೆಲವು ಕಡೆ ಭೂಮಿಯ ಲಭ್ಯತೆ ಸಮಸ್ಯೆ ಇದೆ, ಭೂಮಿ ದೊರೆತ ಬಳಿಕ ಉಪಸ್ಥಾವರಗಳನ್ನು ನಿರ್ಮಿಸಲಾಗುವುದು. ಆ ಭಾಗದಲ್ಲಿ ವಿದ್ಯುತ್ ಮಾರ್ಗ ಕಾಮಗಾರಿ ನಡೆಯುತ್ತಿದೆ. ಅದು ಪೂರ್ಣಗೊಂಡ ಬಳಿಕ ವೋಲ್ಟೆ?ಜ್ ಗುಣಮಟ್ಟದ ಸಮಸ್ಯೆ ನಿವಾರಣೆಯಾಗಲಿದೆ ಎಂದರು.
ಈವರೆಗೂ ವರ್ಷಕ್ಕೆ 40 ಉಪಸ್ಥಾವರಗಳನ್ನು ನಿರ್ಮಿಸಲಾಗುತ್ತಿತ್ತು. ಪ್ರಸಕ್ತ ವರ್ಷ 100 ಉಪಸ್ಥಾವರಗಳ ನಿರ್ಮಾಣವನ್ನು ಕೈಗೆತ್ತಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ 440 ಉಪಸ್ಥಾವರಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


