ಬೆಂಗಳೂರು: ಮೈಸೂರು ಮುಡಾ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದರ ಮತ್ತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವುದರ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧವಿಲ್ಲ. ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ. 50:50 ಸೈಟ್ಗಳನ್ನು ಮುಟ್ಟುಗೋಲು ಹಾಕಿದ್ದೇವೆ ಎನ್ನುತ್ತಿದ್ದಾರೆ. ಆದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿ ಇಡಿಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿಸಿದೆ. ಅದು ರಾಜಕೀಯ ಪ್ರೇರಿತ ಮಾಧ್ಯಮ ಪ್ರಕಟಣೆ ಎಂದು ಟೀಕೆ ಮಾಡಿದರು.
ಇನ್ನು ರಾಜ್ಯದ ಹಲವೆಡೆ ಮೈಕ್ರೋ ಫೈನಾನ್ಸ್ನಿಂದ ಕಿರುಕುಳ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಮೈಕ್ರೋ ಫೈನಾನ್ಸ್ನವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಯಾರೇ ಕಿರುಕುಳ ಕೊಟ್ಟರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಇನ್ನು ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವ ಘಟನೆಯನ್ನು ಖಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಹಲ್ಲೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಸೂಚನೆ ನೀಡಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


