Wednesday, September 2, 2026
spot_img
More
    spot_img
    HomeBreaking Newsದೂರುದಾರನ ಹೇಳಿಕೆ ಕುರಿತು: SIT ಸ್ಪಷ್ಟನೆ

    ದೂರುದಾರನ ಹೇಳಿಕೆ ಕುರಿತು: SIT ಸ್ಪಷ್ಟನೆ

    ದೂರುದಾರನ ಹೇಳಿಕೆ ಕುರಿತು: SIT ಸ್ಪಷ್ಟನೆ

    Advertisement

    ಧರ್ಮಸ್ಥಳ ಪ್ರಕರಣದಲ್ಲಿ ‘ಮಾಸ್ಕ್‌ಮ್ಯಾನ್’ ಎಂಬ ರಹಸ್ಯ ವ್ಯಕ್ತಿ ಯಾರು ಎಂಬುದರ ಬಗ್ಗೆ ಹಲವು ಊಹಾಪೋಹಗಳು ನಡೆಯುತ್ತಿದ್ದವು. ಈ ಕುರಿತಂತೆ ತನಿಖೆ ನಡೆಸುತ್ತಿರುವ SIT ಈಗ ಸ್ಪಷ್ಟನೆ ನೀಡಿದೆ.

    2014ರ ನಂತರ ನಾನು ತಮಿಳುನಾಡಿನಲ್ಲಿ ವಾಸಿಸುತ್ತಿದ್ದೆ. 2023ರಲ್ಲಿ ಒಂದು ಗುಂಪು ನನ್ನನ್ನು ಸಂಪರ್ಕಿಸಿ ಧರ್ಮಸ್ಥಳದಲ್ಲಿ ಪತ್ತೆಯಾದ ಶವಗಳ ಬಗ್ಗೆ ಕೇಳಿತು. ಆ ಸಮಯದಲ್ಲಿ ತಪ್ಪು ಹೇಳಿಕೆ ನೀಡುವಂತೆ ಒತ್ತಡ ಹಾಕಲಾಯಿತು ಎಂದು ದೂರುದಾರರು ನೀಡಿದ ಹೇಳಿಕೆಯ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಹರಡಿತ್ತು.

    ಧರ್ಮಸ್ಥಳದಲ್ಲಿ ಶವ ಹೂತಿರುವ ಬಗ್ಗೆ ನನ್ನನ್ನು ಕೇಳಿತ್ತು. ನಾನು ಕಾನೂನು ಪ್ರಕಾರವೇ ಶವಗಳನ್ನು ಹೂತಿರುವುದಾಗಿ ಹೇಳಿದ್ದೇ. ಆದರೆ ಈ ಗುಂಪು ತಪ್ಪು ಹೇಳಿಕೆ ನೀಡುವಂತೆ ಒತ್ತಡ ಹಾಕಿತ್ತು ಎಂದು ಸಾಕ್ಷಿ ಹಾಗೂ ದೂರುದಾರ ಹೇಳಿಕೆ ನೀಡಿದ್ದಾನೆಂಬ ಸುದ್ದಿ ಸಾಕಷ್ಟು ಚರ್ಚೆಗಳಿಗೆ ಗ್ರಾಸವಾಗಿದೆ.

    SIT ಅಧಿಕಾರಿಗಳ ಪ್ರಕಾರ, ದೂರುದಾರ ತಮ್ಮ ಹೇಳಿಕೆಯಲ್ಲಿ ತಮಿಳುನಾಡಿನಲ್ಲಿ ಇದ್ದಾಗ ಗುಂಪೊಂದು ಅವರನ್ನು ಸಂಪರ್ಕಿಸಿದೆ ಎಂಬ ಮಾಹಿತಿ ನೀಡಿಲ್ಲ. SIT ಸ್ಪಷ್ಟನೆ ನೀಡಿದ್ದು, ದೂರುದಾರನ ನಿಜವಾದ ಹೇಳಿಕೆಯಲ್ಲಿ ತಮಿಳುನಾಡಿನಲ್ಲಿ ಇದ್ದ ವೇಳೆ ಯಾವುದೇ ಗುಂಪು ಸಂಪರ್ಕಿಸಿದೆ ಎಂದು ಉಲ್ಲೇಖವಾಗಿಲ್ಲ ಎಂದು ತಿಳಿಸಿದೆ. ಇದರಿಂದ ‘ಮಾಸ್ಕ್‌ಮ್ಯಾನ್’ ಹಿಂದಿರುವವರು ಯಾರು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಬರದೇ ಉಳಿದಿದೆ.

    ದೂರುದಾರನ ಅಂತಹ ಯಾವುದೇ ಹೇಳಿಕೆ ನಮಗೆ ಸಿಕ್ಕಿಲ್ಲ. ಪ್ರಸ್ತುತ, ನಾವು ಅವರನ್ನು ದೂರುದಾರ ಎಂದು ಪರಿಗಣಿಸುತ್ತೇವೆ. ಸೆಕ್ಷನ್ 164 ರ ಅಡಿಯಲ್ಲಿ ಅವರು ನೀಡಿರುವ ಹೇಳಿಕೆಯನ್ನು ದಾಖಲಿಸಿಕೊಳ್ಳುವುದನ್ನು ಮುಂದುವರೆಸುತ್ತೇವೆಂದು ಎಸ್‌ಐಟಿ ಅಧಿಕಾರಿಯೊಬ್ಬರು ಹೇಳಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading