ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪವನ್ ಮತ್ತು ನಂದೀಶ್ಗೆ ಸೆಷನ್ಸ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ಗೆ ಸಂಬಂಧಿಸಿದಂತೆ ಇಂದು ಆರೋಪಿಗಳಾದ ಪವನ್ ಮತ್ತು ನಂದೀಶ್ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಸೇಷನ್ಸ್ ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಎ2 ಆರೋಪಿಗೆ ದರ್ಶನ್ಗೆ ಹೈಕೋರ್ಟ್ ಆರು ವಾರಗಳ ಕಾಲ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿದೆ. ಆದರೆ ಪೊಲೀಸ್ ಇಲಾಖೆಯೂ ಮಧ್ಯಂತರ ಜಾಮೀನು ಅರ್ಜಿಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ. ಈ ಮಧ್ಯೆಯೇ ಇಬ್ಬರು ಆರೋಪಿಗಳ ಜಾಮೀನನ್ನು ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


