ಮೈಸೂರು: ಭಾರತ ದೇಶವನ್ನು ಕೇವಲ ಒಂದೇ ಒಂದು ಧರ್ಮದ ರಾಷ್ಟ್ರವಾಗಿ ಮಾಡಲು ನಾವು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹಿಂದೂ ರಾಷ್ಟ್ರ ಪರಿಕಲ್ಪನೆಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಭಾರತವು ವಿವಿಧ ಜಾತಿ, ಧರ್ಮ, ಸಂಸ್ಕೃತಿಯಿಂದ ಕೂಡಿರುವ ದೇಶವಾಗಿದೆ. ಆದರೆ ಕೆಲ ರಾಜಕೀಯ ಗುಂಪುಗಳು ಕೇವಲ ರಾಜಕೀಯ ಲಾಭಕ್ಕಾಗಿ ಹಿಂದೂ ಧರ್ಮದ ರಾಷ್ಟ್ರವನ್ನಾಗಿಸಲು ಹೊರಟಿದ್ದಾರೆ. ಅದನ್ನು ನಾವೆಲ್ಲರೂ ವಿರೋಧಿಸಬೇಕು. ಇಲ್ಲವಾದರೆ ಭಾರತವು ಒಂದು ಧರ್ಮದ ರಾಷ್ಟ್ರವಾಗಿ ಉಳಿಯುತ್ತದೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ಹಿಂದೂ ರಾಷ್ಟ್ರ ನಿರ್ಮಾಣ ಅಸಾಧ್ಯ. ಏಕೆಂದರೆ ಸಂವಿಧಾನದ ಪೀಠಿಕೆಯಲ್ಲಿ ಎಲ್ಲಾ ಜನಾಂಗದ ಹಾಗೂ ಧರ್ಮದ ಹಕ್ಕು ಮತ್ತು ಸ್ವಾತಂತ್ರ್ಯವನ್ನು ರಕ್ಷಿಸುತ್ತದೆ ಎಂಬಂತೆ ಉಲ್ಲೇಖಿಸಿದೆ. ಭಾರತವನ್ನು ಒಂದು ಧರ್ಮದ ರಾಷ್ಟ್ರ ಮಾಡಲು ಹೊರಟಿರುವುದು ಅಪಾಯಕಾರಿಯಾಗಿದೆ. ಹೀಗಾಗಿ ಸಂವಿಧಾನವನ್ನು ರಕ್ಷಣೆ ಮಾಡಬೇಕು ಎಂದು ಕರೆ ನೀಡಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


