Monday, August 10, 2026
spot_img
More
    spot_img
    HomeStateDistrictರಸಗೊಬ್ಬರ ಬಳಕೆಯಿಂದ ಹೆಚ್ವಿನ ಇಳುವರಿ ಎಂಬುದು ತಪ್ಪು ಕಲ್ಪನೆ

    ರಸಗೊಬ್ಬರ ಬಳಕೆಯಿಂದ ಹೆಚ್ವಿನ ಇಳುವರಿ ಎಂಬುದು ತಪ್ಪು ಕಲ್ಪನೆ

    “ರೈತರು ರಸಗೊಬ್ಬರ ಬಳಕೆಯನ್ನು ಕಡಿಮೆ ಮಾಡಬೇಕಾಗಿದೆ‌. ರಸಗೊಬ್ಬರ ಬಳಕೆಯಿಂದ ಹೆಚ್ವಿನ ಇಳುವರಿ ಬರುತ್ತದೆ ಎಂಬ ತಪ್ಪು ಕಲ್ಪನೆಯಿಂದ ಹೊರಬರಬೇಕಾಗಿದೆ‌. ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು ಪ್ರತಿಶತ 90 ಕೃಷಿ ಮೇಲೆಯೇ ಅವಲಂಬಿತವಾಗಿದೆ. ರೈತರಿಗೆ ಬೇಕಾದ ಸಹಾಯ ಮಾಡುವುದು ಸರ್ಕಾರಗಳ ಜವಾಬ್ದಾರಿಯಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

    Advertisement

    ಶನಿವಾರ ಅವರು ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿನ ಬೆಳಗಾಂ ಶುಗರ್ಸ ಹತ್ತಿರ ಖಾಸಗಿ ಜಮೀನಿನಲ್ಲಿ ಜಿಲ್ಲಾಡಳಿತ, ಜಿಲ್ಲಾ‌ಪಂಚಾಯತಿ ಬೆಳಗಾವಿ, ಕೃಷಿ ಇಲಾಖೆ ಹಾಗೂ ಸಕ್ಕರೆ ಕಾರ್ಖಾನೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಬೆಳಗಾವಿ, ಬಾಗಲಕೋಟ, ವಿಜಯಪುರ, ಕಲಬುರಗಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಚಾಲನೆ ನೀಡಿದರು.

    ಸಿದ್ದರಾಮಯ್ಯ ಮಾತನಾಡಿ, “ರಾಜ್ಯ ಸರ್ಕಾರ ರೈತ ಪರ ಸರ್ಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು” ಎಂದು ಹೇಳಿದರು.

    “ನೀರಿನ ನಿರ್ವಹಣೆ ಕುರಿತು ಪ್ರತಿಯೊಬ್ಬರು ತಿಳಿದುಕೊಂಡು ನೀರನ್ನು ಮಿತವಾಗಿ ಬಳಸಬೇಕು. ಈ ಕುರಿತು‌ ಕೃಷಿ ಇಲಾಖೆ ಪ್ರತಿ ರೈತರ ಹತ್ತಿರ ಹೋಗಿ ಇಲಾಖೆಯಿಂದ ಪರಿಚಯಿಸಲಾಗುವ ಹೊಸ ತಳಿಗಳ ಕುರಿತು ಮಾಹಿತಿ ನೀಡಬೇಕು. ಕಳೆದ ಆಯವ್ಯಯಲ್ಲಿ ಘೋಷಿಸಿದಂತೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ” ಎಂದರು.

    “ರೈತರು ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವುದರ ಮೂಲಕ ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯಲು ಮುಂದಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಸಬ್ಸಿಡಿ ಮೂಲಕ ಹೊಸ ಯಂತ್ರೋಪಕರಣಗಳನ್ನು ವಿತರಿಸುತ್ತಿದೆ” ಎಂದು ತಿಳಿಸಿದರು.

    “ರಾಜ್ಯದಲ್ಲಿಯೇ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ವ್ಯವಸಾಯ ಮಾಡಲಾಗುತ್ತಿದೆ. ಅಲ್ಲಿನ ರೈತರು ಕೃಷಿ ಇಲಾಖೆಯಿಂದ ಜಾರಿಯಲ್ಲಿರುವ ಸಾಕಷ್ಟು ಯೋಜನೆಗಳನ್ನು ಪಡೆದು ಅಭಿವೃದ್ಧಿಪರ ಕೃಷಿ ಮಾಡುತ್ತಿದ್ದಾರೆ. ಕೃಷಿ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ ರೈತರಿಗೆ ಹೊಸ ಹೊಸ ತಂತ್ರಜ್ಞಾನ ಬಳಕೆ, ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳುವ ಕುರಿತು ಜಾಗೃತಿ ಮೂಡಿಸಬೇಕು. ಕೃಷಿಯನ್ನು ಲಾಭದಾಯಕ‌ವ್ನಾಗಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸಲು ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ” ಎಂದರು.

    ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, “ರಾಜ್ಯದ ಕಬ್ಬು ಬೆಳೆಗಾರರಿಗೆ ಅನುಕೂಲವಾಗಬೇಕು. ಬೆಳೆಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳುವುದರ ಮೂಲಕ ಉತ್ತಮ ಆದಾಯ ಪಡೆಯಬೇಕೆನ್ನುವ ಉದ್ದೇಶದಿಂದ ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ, ನೀರಿನ ಸಮಗ್ರ ನಿರ್ವಹಣೆ ಯೋಜನೆಯನ್ನು ಜಾರಿಗೊಳಿಸಲಾಗಿದೆ” ಎಂದು ಹೇಳಿದರು.

    “ರೈತರಿಗೆ ಅನುಕೂಲವಾಗುವ ಎಲ್ಲ ಯೋಜನೆಗಳನ್ನು ನೀಡುವ ಮೂಲಕ ರೈತರಿಗೆ ಬೆಂಬಲಿಸುವ‌ ಕಾರ್ಯ ಸಿದ್ಧರಾಮಯ್ಯನವರ ನೇತೃತ್ವದ ನಮ್ಮ‌ ಸರಕಾರ ಮಾಡುತ್ತಿದೆ. ಕಡಿಮೆ ನೀರು,‌ ಖರ್ಚಿನಲ್ಲಿ ಉತ್ತಮ ಇಳುವರಿ ತೆಗೆಯಬಹುದಾದ ತಳಿಗಳನ್ನು ಪರಿಚಯಿಸುವುದರ ಮೂಲಕ ರೈತರು ಉತ್ತಮ ಆದಾಯ ಪಡೆಯಬಹುದಾದ ಕಾರ್ಯಕ್ರಮ ರೂಪಿಸಲಾಗಿದೆ” ಎಂದರು.

    “ಕಬ್ಬು ಕಟಾವು ಯಂತ್ರಗಳನ್ನು ಸಬ್ಸಿಡಿ ಮೂಲಕ ವಿತರಿಸುತ್ತಿರುವುದು ರಾಷ್ಟ್ರಕ್ಕೆ ಮಾದರಿಯಾಗಿದೆ. ಇಂತಹ ಯೋಜನೆಗಳ‌ ಮೂಲಕ ಕೃಷಿ ಕಾರ್ಮಿಕರ ಕೊರತೆ ನೀಗಿಸುವುದರ ಜೊತೆಗೆ ಉತ್ತಮ‌ ಆದಾಯ ಪಡೆಯಬಹುದಾಗಿದೆ” ಎಂದು ಚಲುವರಾಯಸ್ವಾಮಿ ಹೇಳಿದರು.

    ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, “ರಾಜ್ಯ ಸರಕಾರವು ರೈತರು ವೈಜ್ಞಾನಿಕ ಪದ್ದತಿಯನ್ನು ಅಳವಡಿಸಿಕೊಳ್ಳುವ ಮೂಲಕ ದುಪ್ಪಟ್ಟು ಆದಾಯ ಪಡೆಯಲು ಅನುಕೂಲವಾಗುವಂತೆ ಸರಕಾರ ಅನೇಕ ಯೋಜನೆ ಹಾಗೂ ಸೌಲಭ್ಯಗಳನ್ನು ನೀಡುವುದರ ಮೂಲಕ ಕೃಷಿ ಕ್ಷೇತ್ರದಲ್ಲಿ ಬದಲಾವಣೆಯನ್ನು ತರಲಾಗಿದೆ” ಎಂದು ತಿಳಿಸಿದರು.

    “ಬೇರೆ ರಾಷ್ಟ್ರಗಳಲ್ಲಿ ಕಡಿಮೆ‌ ಭೂಮಿಯಲ್ಲಿ ಉತ್ತಮ ಇಳುವರಿ ಪಡೆಯುತ್ತಿದ್ದು, ಅದೇ ರೀತಿ ನಮ್ಮ ರೈತರ ಭೂಮಿ‌ಯಲ್ಲಿಯೂ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಉತ್ತಮ ಆದಾಯ ಪಡೆಯುವುದರ ಮೂಲಕ ಸ್ವಾವಲಂಬಿಗಳಾಗಬೇಕು ಎನ್ನುವುದು ರಾಜ್ಯ ಸರಕಾರದ‌ ಮಹತ್ವಾಕಾಂಕ್ಷೆಯಾಗಿದೆ. ಈ ನಿಟ್ಟಿನಲ್ಲಿ ಸರಕಾರವು ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading