ಬೆಂಗಳೂರು: ಹೊರ ರಾಜ್ಯದ ಜಾನುವಾರುಗಳನ್ನು ತಂದು ನಮ್ಮ ರಾಜ್ಯದ ಕಾಡಿನಲ್ಲಿ ಮೇಯಿಸುವುದನ್ನು ನಿಷೇಧಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಈ ಬಗ್ಗೆ ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವು ಸಂಭವಿಸಿದಾಗ ತಮಿಳುನಾಡಿನಿಂದ ಸಾವಿರಾರು ಜಾನುವಾರುಗಳನ್ನು ತಂದು ನಮ್ಮ ಅರಣ್ಯ ನಾಶಪಡಿಸುತ್ತಿರುವ ಅಂಶ ನನ್ನ ಗಮನಕ್ಕೆ ಬಂದಿದೆ. ಆದ್ದರಿಂದ ಹೊರ ರಾಜ್ಯದ ಜಾನುವಾರುಗಳನ್ನು ನಮ್ಮ ಕಾಡಿನಲ್ಲಿ ಮೇಯಿಸುವುದಕ್ಕೆ ನಿಷೇಧ ಹೇರಲಾಗಿದೆ ಎಂದರು.
ಮುಂದುವರಿದು ಮಾತನಾಡಿದ ಅವರು, ನಮ್ಮ ರಾಜ್ಯದ ಕುರಿಗಾಹಿಗಳಿಗೆ ಯಾವುದೇ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಧರ್ಮಸ್ಥಳದ ನ್ಯಾಯ ಪರಂಪರೆಗೆ ಕಂಟಕ: ನ್ಯಾಯದಿಂದ ಗೊಂದಲದೆಡೆಗೆ?
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


