ಬೆಂಗಳೂರು: ಆಡಳಿತ ಪಕ್ಷದ ಸದಸ್ಯರ ವಿರೋಧದಿಂದಾಗಿ ಕರ್ನಾಟಕ ಭೂಕಂದಾಯ ತಿದ್ದುಪಡಿ ವಿಧೇಯಕವನ್ನು ಅಂಗೀಕರಿಸುವ ಬದಲಾಗಿ, ವಿಧಾನಸಭೆಯ ಆಯ್ಕೆ ಸಮಿತಿಗೆ ವಹಿಸುವ ನಿರ್ಣಯ ಕೈಗೊಳ್ಳಲಾಯಿತು.
ವಿಧಾನಸಭೆಯ ಶಾಸನ ರಚನಾ ಕಲಾಪದಲ್ಲಿ ಕಂದಾಯ ಸಚಿವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ವಿಧೇಯಕ 2025 ಅನ್ನು ಮಂಡಿಸಿ ಪರ್ಯಾಲೋಚನೆಗೆ ಮನವಿ ಮಾಡಿದರು.
ಕೊಡಗು ಭಾಗದಲ್ಲಿನ ಜಮ, ಬಾಣೆ ಹಿಡುವಳಿ ವ್ಯವಸ್ಥೆಗಳಿಗೆ ಸಂಬಂಧಪಟ್ಟಂತ ವಿಧೇಯಕ ಇದಾಗಿದ್ದು, ಅಂಗೀಕಾರ ನೀಡಬೇಕು ಎಂದು ಮನವಿ ಮಾಡಿದರು.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರೂ ಆಗಿರುವ ಶಾಸಕ ಎ.ಎಸ್. ಪೊನ್ನಣ್ಣ, ಕೊಡಗಿನಲ್ಲಿ ಹಲವಾರು ವರ್ಷಗಳಿಂದ ಸಮಸ್ಯೆಗೆ ಕಾರಣವಾಗಿರುವ ಭೂ ದಾಖಲಾತಿಗಳ ಲೋಪಗಳನ್ನು ಸರಿಪಡಿಸುವ ಉದ್ದೇಶದಿಂದ ಕಾಯ್ದೆ ರೂಪಿಸಬೇಕಿತ್ತು. ಆದರೆ ಅದಕ್ಕೆ ವ್ಯತಿರಿಕ್ತವಾಗಿ ಈ ಮಸೂದೆ ಇದೆ. ಜಮೀನು ಸ್ವಾಧೀನದಲ್ಲಿ ಇರುವವರು ಬೇರೆ, ದಾಖಲಾತಿಗಳಲ್ಲಿ ನಮೂದಾಗಿರುವ ಹೆಸರುಗಳು ಬೇರೆ ಬೇರೆ ಎಂಬ ವ್ಯವಸ್ಥೆ ಇದೆ. ಅದನ್ನು ಸರಿಪಡಿಸಲು ಈ ಕಾಯ್ದೆ ಸಮರ್ಥವಾಗಿಲ್ಲ ಎಂದರು.
ಶಾಸಕ ಮಂಥರ ಗೌಡ ಕೂಡ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿ, ದಾಖಲಾತಿಗಳ ತಿದ್ದುಪಡಿಯಾಗಬೇಕು ಎಂದು ಮನವಿ ಮಾಡಿದರು. ಈ ವಿಧೇಯಕವನ್ನು ಆಯ್ಕೆ ಸಮಿತಿಗೆ ಒಪ್ಪಿಸುವಂತೆ ಒತ್ತಾಯಿಸಿದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಇದಕ್ಕೆ ಧ್ವನಿಗೂಡಿಸಿದರು. ಒತ್ತಾಯಕ್ಕೆ ಮಣಿದ ಸಚಿವ ಎಚ್.ಕೆ.ಪಾಟೀಲ್ ವಿಧೇಯಕವನ್ನು ಆಯ್ಕೆ ಸಮಿತಿಗೆ ವಹಿಸುವುದಾಗಿ ತಿಳಿಸಿದರು.
ಸದನದ ಅಭಿಪ್ರಾಯದಂತೆ ವಿಧಾನಸಭೆಯ ಆಯ್ಕೆ ಸಮಿತಿ ರಚಿಸುವುದಾಗಿ ಸಭಾಧ್ಯಕ್ಷ ಯು.ಟಿ.ಖಾದರ್ ಪ್ರಕಟಿಸಿದರು.
ಧರ್ಮಸ್ಥಳ ಸಂಘದಲ್ಲಿ ಕಡಿಮೆ ಬಡ್ಡಿಗೆ ಸಾಲ ಕೊಟ್ಟಿದ್ದಕ್ಕೆ ಶುರುವಾಯ್ತಾ ಧರ್ಮಸ್ಥಳ ಕೊಲೆ, ಅತ್ಯಾಚಾರ ಆರೋಪ?
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


