Friday, August 7, 2026
spot_img
More
    spot_img
    HomeSportsನಾಳೆಯಿಂದ ಬಾರ್ಡರ್‌ - ಗವಾಸ್ಕರ್‌ ಟ್ರೋಫಿ; ಎಲ್ಲಿ ಸ್ಟ್ರೀಮಿಂಗ್?‌ ಇಲ್ಲಿದೆ ವಿವರ

    ನಾಳೆಯಿಂದ ಬಾರ್ಡರ್‌ – ಗವಾಸ್ಕರ್‌ ಟ್ರೋಫಿ; ಎಲ್ಲಿ ಸ್ಟ್ರೀಮಿಂಗ್?‌ ಇಲ್ಲಿದೆ ವಿವರ

    ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023-25ರ ಭಾಗವಾಗಿ ಭಾರತ ಕ್ರಿಕೆಟ್ ತಂಡ ತನ್ನ ಕೊನೆಯ ಟೆಸ್ಟ್ ಸರಣಿಯನ್ನು ನವೆಂಬರ್ 22ರಿಂದ ಆಸ್ಟ್ರೇಲಿಯಾ ವಿರುದ್ಧ ಆಡಲಿದ್ದು, ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಳೆ ( ನವೆಂಬರ್‌ 22 ) ಪರ್ತ್ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.

    Advertisement

    ಈ ಹಿಂದೆ ನಾಲ್ಕು ಪಂದ್ಯಗಳು ನಡೆಯುತ್ತಿದ್ದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಈ ಬಾರಿ ಸರಣಿಯಲ್ಲಿ ಐದು ಟೆಸ್ಟ್ ಪಂದ್ಯಗಳು ನಡೆಯಲಿವೆ. ಸರಣಿಯ ಮೊದಲ ಟೆಸ್ಟ್ ನವೆಂಬರ್22 ರಿಂದ ಪ್ರಾರಂಭವಾಗಲಿದೆ. ಈ ಪಂದ್ಯಗಳನ್ನು ಭಾರತದಲ್ಲಿ ಯಾವಾಗ ಮತ್ತು ಯಾವ ಸಮಯದಲ್ಲಿ ವೀಕ್ಷಿಸಬಹುದು ಎಂಬ ಮಾಹಿತಿ ಮುಂದಿದೆ ಓದಿ..

    ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್‌ಗೆ ಅರ್ಹತೆ ಪಡೆದುಕೊಳ್ಳಬೇಕೆಂದರೆ ಭಾರತ ಆಸ್ಟ್ರೇಲಿಯಾವನ್ನು ಕನಿಷ್ಠ 4-0 ಅಂತರದಿಂದ ಸೋಲಿಸಬೇಕಾಗಿದೆ. ಅಂತಹ ಪರಿಸ್ಥಿತಿಯಲ್ಲಿರುವ ಟೀಮ್ ಇಂಡಿಯಾ ತನ್ನ ಅಭಿಯಾನವನ್ನು ಗೆಲುವಿನೊಂದಿಗೆ ಪ್ರಾರಂಭಿಸಬೇಕಾಗಿದೆ. ಆದರೆ ಈ ಬಾರಿ ಆಸ್ಟ್ರೇಲಿಯಾ ತಂಡವು ತವರಿನಲ್ಲಿ ಭಾರತಕ್ಕೆ ಕಠಿಣ ಸವಾಲನ್ನು ನೀಡಲು ಸಂಪೂರ್ಣವಾಗಿ ಸಿದ್ಧವಾಗಿದೆ.

    ನೇರಪ್ರಸಾರ: ಟೆಸ್ಟ್ ಸರಣಿ ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್​ನಲ್ಲಿ ನೇರ ಪ್ರಸಾರವಾಗಲಿದೆ. ಇದಲ್ಲದೆ, ಅಭಿಮಾನಿಗಳು ಡಿಸ್ನಿ + ಹಾಟ್​ಸ್ಟಾರ್​ ಅಪ್ಲಿಕೇಶನ್ ಮೂಲಕ ಸರಣಿಯ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

    ಸಮಯ: ಪರ್ತ್‌ನ ಆಪ್ಟಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯ ಭಾರತೀಯ ಕಾಲಮಾನದಲ್ಲಿ ಬೆಳಗ್ಗೆ 7.50ಕ್ಕೆ ಪಂದ್ಯ ಆರಂಭವಾಗಲಿದೆ. ಮೊದಲ ಸೆಷನ್​ ಬೆಳಗ್ಗೆ 7.50ರಿಂದ 9.50ರವರೆಗೆ ನಡೆಯಲಿದೆ. ಊಟದ ವಿರಾಮ ಬೆಳಿಗ್ಗೆ 9.50 ರಿಂದ 10.30 ರವರೆಗೆ ಇರುತ್ತದೆ. ಎರಡನೇ ಸೆಷನ್​ ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ನಡೆಯಲಿದೆ. ಮಧ್ಯಾಹ್ನ 12.30 ರಿಂದ 12.50 ರವರೆಗೆ ಚಹಾ ವಿರಾಮ ಇರುತ್ತದೆ. ಮೂರನೇ ಸೆಷನ್​ ಮಧ್ಯಾಹ್ನ 12.50ರಿಂದ 2.50ರವರೆಗೆ ನಡೆಯಲಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading