Saturday, September 19, 2026
spot_img
More
    spot_img
    HomeLatest newsಒಲಂಪಿಕ್ಸ್‌ನಲ್ಲಿ ಚಿನ್ನ ಪಡೆದವರಿಗೆ ಭರ್ಜರಿ ಬಹುಮಾನ ಘೋಷಿಸಿದ ಸಿದ್ದರಾಮಯ್ಯ

    ಒಲಂಪಿಕ್ಸ್‌ನಲ್ಲಿ ಚಿನ್ನ ಪಡೆದವರಿಗೆ ಭರ್ಜರಿ ಬಹುಮಾನ ಘೋಷಿಸಿದ ಸಿದ್ದರಾಮಯ್ಯ

    ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

    Advertisement

    ಅವರು ಇಂದು ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

    ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, 1958 ರಲ್ಲಿ ಪ್ರಾರಂಭವಾದ ಒಲಂಪಿಕ್ಸ್ ಸಂಸ್ಥೆ ಇಲ್ಲಿಯವರೆಗೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದೆ. ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್ ಅವರು ಸಂಸ್ಥೆಯ ಅಧ್ಯಕ್ಷತೆ ವಹಿಸಿಕೊಂಡ ನಂತರ ಸಂಸ್ಥೆಯು ಹೆಚ್ಚು ಕ್ರಿಯಾಶೀಲವಾಗಿದೆ. ನನ್ನ ಅವಧಿಯಲ್ಲಿಯೇ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನೂ ನಾನೇ ನೆರವೇರಿಸಿದ್ದೇನೆ. ಇಡೀ ದೇಶದಲ್ಲಿಯೇ ಆಂಧ್ರ ಮತ್ತು ಕೇರಳ ರಾಜ್ಯದಂತೆ ಕರ್ನಾಟಕದಲ್ಲಿಯೂ ಸಂಸ್ಥೆಯು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯು ಎಲ್ಲಾ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದರು.

    ನಮ್ಮ ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ.ಗಳ ನಗದು ಬಹುಮಾನವನ್ನು ಘೋಷಿಸಲಾಗಿದೆ. ಅಂತೆಯೇ ಬೆಳ್ಳಿ ಪದಕ ಪಡೆದರೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಗೆದ್ದರೆ 3 ಕೋಟಿ ರೂ. ನಗದು ಬಹುಮಾನವನ್ನು ಸರ್ಕಾರ ಘೋಷಿಸಿದೆ. ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದರು.

    ಕಠಿಣ ಪರಿಶ್ರಮ ಹಾಗೂ ಗುರಿಸಾಧನೆ ಮಾಡುವ ಛಲವಿದ್ದರೆ, ಕರ್ನಾಟಕದ ಕ್ರೀಡಾಪಟು ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲಬಹುದಾಗಿದೆ. ಕರ್ನಾಟಕದ ಕ್ರೀಡಾಪಟುಗಳು ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ. ಕ್ರೀಡೆಯಲ್ಲಿ ಕ್ರೀಡಾಸ್ಪೂರ್ತಿ ಅತ್ಯಂತ ಅವಶ್ಯಕ. ಗುರಿಸಾಧನೆಯೇ ಜೀವನದ ಧ್ಯೇಯವಾಗಬೇಕು ಎಂದರು.

    ಕ್ರೀಡಾಪಟುಗಳಿಗೆ ಸರ್ಕಾರದ ನೇಮಕಾತಿಯಲ್ಲಿಯೂ ಮೀಸಲಾತಿಯನ್ನು ಒದಗಿಸಿದೆ. ಪೊಲೀಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಶೇ. 3ರಷ್ಟು ಹಾಗೂ ಇನ್ನುಳಿದ ಇಲಾಖೆಗಳಲ್ಲಿ ಶೇ. 2 ರಷ್ಟು ಕ್ರೀಡಾಪಟುಗಳಿಗೆ ಮೀಸಲಾತಿ ನೀಡಲಾಗುವುದು. ಜನವರಿಯಲ್ಲಿ ಕ್ರೀಡಾಮೀಸಲಾತಿಯಡಿಯಲ್ಲಿ ಸರ್ಕಾರಿ ಉದ್ಯೋಗದ ನೇಮಕಾತಿಗೆ ಸರ್ಕಾರಿ ಆದೇಶವನ್ನು ಹೊರಡಿಸಲಾಗುತ್ತದೆ. ಆದ್ದರಿಂದ ಹೆಚ್ಚಿನ ಯುವಜನರು ಕ್ರೀಡಾ ಕ್ಷೇತ್ರದಲ್ಲಿ ಭಾಗಿಯಾಗಬೇಕೆಂದು ತಿಳಿಸಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading