ಬೆಂಗಳೂರು: ಮುಖ್ಯ ಪೈಪ್ ಲೈನ್ ನೀರು ನಿಲುಗಡೆ ಕಾಮಗಾರಿ ನಡೆಯುತ್ತಿರುವ ಕಾರಣದಿಂದಾಗಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ( ಜನವರಿ 22 ) ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ನಾಲ್ಕನೇ ಹಂತ 2ನೇ ಹೆಗ್ಗನಹಳ್ಳಿಯಿಂದ ಜಿಕೆವಿಕೆ ಕಡೆಗೆ ಸಾಗುವ 1800 ಮಿ.ಮೀ ವ್ಯಾಸದ ನೀರಿನ ಮುಖ್ಯ ಪೈಪ್ನ ನೀರು ನಿಲುಗಡೆ ಮಾಡುವ ಕಾಮಗಾರಿ ಆರಂಭವಾಗುತ್ತಿದ್ದು, ಇದರಿಂದ ಇಂದು ಹಲವು ಏರಿಯಾಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ತಿಳಿಸಿದೆ.
ಇನ್ನು ಇಂದು ( ಜನವರಿ 22 ) ಬೆಳಗ್ಗೆ 5 ಗಂಟೆಯಿಂದ ನಾಳೆ (ಜನವರಿ 23) ಬೆಳಗ್ಗೆ 5 ಗಂಟೆವರೆಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಯಾವ್ಯಾವ ಪ್ರದೇಶಗಳಲ್ಲಿ ಈ ವ್ಯತ್ಯಯವಿರಲಿದೆ ಎಂಬ ಪಟ್ಟಿ ಮುಂದಿದೆ..
ಆರ್.ಆರ್.ನಗರ, ಐಡಿಯಲ್ ಹೋಮ್ಸ್, ಕೆಂಚೇನಹಳ್ಳಿ, ಕೋಡಿಪಾಳ್ಯ, ಚನ್ನಸಂದ್ರ, ಕೆಂಗೇರಿ, ನಾಗದೇವನಹಳ್ಳಿ, ಮರಿಯಪ್ಪನಪಾಳ್ಯ, ನಾಗರಬಾವಿ, ಮಲ್ಲತ್ತಹಳ್ಳಿ, ಕೊಟ್ಟಿಗೆಪಾಳ್ಯ, ಹೇರೋಹಳ್ಳಿ, ಹೆಗ್ಗನಹಳ್ಳಿ, ಸುಂಕದಕಟ್ಟೆ, ರಾಜಗೋಪಾಲನಗರ, ಲಕ್ಷ್ಮೀ ದೇವಿನಗರ, ಲಗ್ಗೆರೆ, ಪೀಣ್ಯ ಕೈಗಾರಿಕಾ ಪ್ರದೇಶ, ಪೀಣ್ಯ, ಟಿ.ದಾಸರಹಳ್ಳಿ, ಹೆಚ್ಎಂಟಿ ಲೇಔಟ್, ಬಾಗಲಗುಂಟೆ, ಅಬ್ಬಿಗೆರೆ, ಬ್ಯಾಟರಾಯನಪುರ, ಅಮೃತಹಳ್ಳಿ, ಜಕ್ಕೂರು, ಕೆಂಪಾಪುರ, ಯಲಹಂಕ ಓಲ್ಡ್ & ನ್ಯೂಟೌನ್, ವಿದ್ಯಾರಣ್ಯಪುರ, ಸಿಂಗಾಪುರ, ಜಾಲಹಳ್ಳಿ, ಬಿಇಎಲ್ ರಸ್ತೆ, ಮುತ್ಯಾಲನಗರ, ಜೆ.ಪಿ.ಪಾರ್ಕ್, ದಾಸರಹಳ್ಳಿ, ಮಹಾಲಕ್ಷ್ಮಿಲೇಔಟ್, ಸುಬ್ರಹ್ಮಣ್ಯನಗರ, ಗಾಯತ್ರಿನಗರ, ಜೆ.ಸಿ.ನಗರ, ಕುರುಬರಹಳ್ಳಿ, ನಂದಿನಿ ಲೇಔಟ್, ಪ್ರಕಾಶನಗರ, ಗೊರಗುಂಟೆಪಾಳ್ಯ, ಕಾಮಾಕ್ಷಿಪಾಳ್ಯ, ಬಸವೇಶ್ವನಗರ, ಶಿವನಹಳ್ಳಿ, ಮಂಜುನಾಥನಗರ, ಶಂಕರಮಠ, ಮಹಾಲಕ್ಷ್ಮೀಪುರಂ, ಶಂಕರನಗರ, ಕಮಲಾನಗರ, ವಿಜಯನಗರ, ಆರ್ಪಿಸಿ ಲೇಔಟ್, ಚೋಳರಪಾಳ್ಯ, ಹಂಪಿನಗರ, ಅಗ್ರಹಾರ ದಾಸರಹಳ್ಳಿ, ರಾಜಾಜಿನಗರ 6ನೇ ಬ್ಲಾಕ್ ಪ್ರದೇಶ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


