ನೆಲಮಂಗಲ: ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲ್ಗೆ ( br patil ) ಕಾಂಗ್ರೆಸ್ ನಾಯಕರೇ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಸತಿ ನಿಗಮದಲ್ಲಿ ನಡೆದಿರುವ ಗೋಲ್ಮಾಲ್ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಕಿಡಿಕಾರಿದರು.
ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಪರ ಬ್ಯಾಟ್ ಬೀಸಿದ ವಿಜಯೇಂದ್ರ ಅವರು, ಪಾಟೀಲ್ ಅವರು ಗಂಭೀರವಾದ ರಾಜ್ಯದ ಪರಿಸ್ಥಿತಿ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಬಡವರಿಗೆ ಮನೆಗಳನ್ನು ಕೊಡಬೇಕಿತ್ತು. ಅಲ್ಲಿಯೂ ಸಹ ಭಾರೀ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ರಾಜ್ಯದ ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ. ಹೀಗಾಗಿ ಪಾಟೀಲ್ರನ್ನು ಆಡಳಿತ ಪಕ್ಷದ ನಾಯಕರೇ ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಈ ಸರ್ಕಾರ ಬಂದಾಗಿನಿಂದ ಬಡವರು, ರೈತರಿಗೆ ಶಾಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ ಯಾವುದೇ ಅನುಕೂಲ ಇಲ್ಲ. ಈ ಸರ್ಕಾರದಲ್ಲಿ ಬರೀ ಭ್ರಷ್ಟಾಚಾರ ನಡೆಯುತ್ತಿದೆ. ಭ್ರಷ್ಟಾಚಾರ ಬಿಟ್ಟರೇ ಬೇರೆ ಯಾವುದೇ ಯೋಜನೆಗಳು ನಡೆಯುತ್ತಿಲ್ಲ. ಯಡಿಯೂರಪ್ಪ ಸರ್ಕಾರ ಇದ್ದಾಗ ಬಡವರಿಗೆ ಅನೇಕ ಯೋಜನೆಗಳು ಇದ್ದವು. ಅವೆಲ್ಲವನ್ನು ಕಾಂಗ್ರೆಸ್ ಸರ್ಕಾರ ಮರೆತಿದೆ. ಇದೆಲ್ಲದರ ವಿರುದ್ಧ ಬಿಜೆಪಿ ಪಕ್ಷ ಬೀದಿಗಿಳಿದು ಹೋರಾಟ ಮಾಡುತ್ತದೆ. ಈ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಿದೆ ಎಂದು ಎಚ್ಚರಿಕೆ ನೀಡಿದರು.
ಕೃಷಿ ಎಐ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
ಅಮೇರಿಕಾ ದಾಳಿಗೂ ಜಗ್ಗದ ಇರಾನ್: ಇಸ್ರೇಲ್ ಮೇಲೆ ಬ್ಯಾಲಿಸ್ಟಿಕ್ ಮಿಸೈಲ್ಗಳ ಸುರಿಮಳೆ | Iran – Israel Conflict
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


