Friday, August 7, 2026
spot_img
More
    spot_img
    HomeTop Storyಕರ್ನಾಟಕ ಅರಾಜಕತೆಯತ್ತ ಸಾಗುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    ಕರ್ನಾಟಕ ಅರಾಜಕತೆಯತ್ತ ಸಾಗುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    ಬೆಂಗಳೂರು: ಕರ್ನಾಟಕ ಅರಾಜಕತೆಯತ್ತ ಸಾಗುತ್ತಿದೆ, ಈ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ, ಯಾವುದೇ ಪ್ರತಿಭಟನೆಗಳು, ಜನರ ಆಕ್ರಂದನದ ಬಿಸಿ ತಟ್ಟುತ್ತಿಲ್ಲ. ಈ ಕ್ಷಣದಿಂದಲಾದರೂ ಜನರ ರಕ್ಷಣೆಗೆ ಧಾವಿಸದಿದ್ದರೆ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

    Advertisement

    ಈ ಕುರಿತು ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಅವರು, ಒಂದು ಕಡೆ ಜನರ ಮಾನ, ಪ್ರಾಣ, ಆಸ್ತಿಗಳಿಗೆ ರಕ್ಷಣೆ ಸಿಗದೆ ಕೊಲೆ, ದರೋಡೆ, ಸುಲಿಗೆ, ಅತ್ಯಾಚಾರಗಳು ತಾಂಡವವಾಡುತ್ತಿದ್ದರೆ, ಮತ್ತೊಂದು ಕಡೆ ಚಕ್ರಬಡ್ಡಿ ವಸೂಲಿ, ಠೇವಣಿ ವಂಚನೆ ನಿರಂತರವಾಗಿ ನಡೆಯುತ್ತಿದೆ. ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಎತ್ತಿ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಸರ್ಕಾರ ಬಂದಾಗಿನಿಂದ ಶೋಷಿತರ ದನಿಯಾಗಿ ಪರಿಶಿಷ್ಟ ಸಮುದಾಯಗಳ ರಕ್ಷಣೆಗೆ ಹಾಗೂ ಪರಿಶಿಷ್ಟ ಕಲ್ಯಾಣದ ಕುರಿತು ವರದಿ ನೀಡಬೇಕಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ ನಿಂತ ನೀರಂತಾಗಿರುವುದು ಅತ್ಯಂತ ದುರ್ದೈವದ ಸಂಗತಿಯಾಗಿದೆ ಎಂದಿದ್ದಾರೆ.

    ಪರಿಶಿಷ್ಟರ ಬಗ್ಗೆ ಮೊಸಳೆಗಣ್ಣೀರು ಸುರಿಸುವ ಸರ್ಕಾರದ ಅಸಲಿ ಮುಖವಾಡ ಈಗ ಬಯಲಾಗಿದೆ. ಪರಿಶಿಷ್ಟರ ಆಯೋಗಗಳಿಗೆ ಅಧ್ಯಕ್ಷರ ನೇಮಕವಾಗಿಲ್ಲದಿರುವ ವಿಷಯ ನ್ಯಾಯಾಲಯದ ಮೆಟ್ಟಿಲು ಹತ್ತುವ ಪರಿಸ್ಥಿತಿಯವರೆಗೂ ತಲುಪಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ನ್ಯಾಯಾಲಯದಿಂದಲೇ ಈ ಸರ್ಕಾರಕ್ಕೆ ಚಾಟಿ ಏಟು ಬೀಳದ ಹೊರತು ಪರಿಶಿಷ್ಟರ ಕುರಿತು ತಲೆಕೆಡಿಸಿಕೊಳ್ಳುವುದಿಲ್ಲ ಎಂಬುದು ಇದೀಗ ಸಾಬೀತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಗ್ಯಾರಂಟಿ ಭಾಗ್ಯಗಳ ಬಗ್ಗೆ ಬೆನ್ನು ತಟ್ಟಿಕೊಳ್ಳುವ ಕಾಂಗ್ರೆಸ್ ಸರ್ಕಾರ ಮಹಿಳೆಯರ ಮಾಂಗಲ್ಯ ಭಾಗ್ಯಕ್ಕೆ ಕುತ್ತು ಬಂದಿದ್ದರೂ ಕಣ್ಣು ಮುಚ್ಚಿ ಕುಳಿತಿದೆ. ಈ ನೆಲದ ಹೆಣ್ಣು ತನಗೆ ಯಾವ ಭಾಗ್ಯ ಕೊಡದಿದ್ದರೂ ಚಿಂತೆ ಇಲ್ಲ ಉಸಿರಿರುವ ತನಕ ಮಾಂಗಲ್ಯ ಭಾಗ್ಯ ಉಳಿಸು ಎಂದು ದೇವಾನುದೇವತೆಗಳಲ್ಲಿ ಪ್ರಾರ್ಥಿಸುತ್ತಾಳೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading