Tuesday, August 11, 2026
spot_img
More
    spot_img
    HomeSportsCricketChampions Trophy 2025: ಭಾರತದ ವಿರುದ್ಧ ಹೀನಾಯ ಸೋಲುಂಡ ಪಾಕಿಸ್ತಾನ

    Champions Trophy 2025: ಭಾರತದ ವಿರುದ್ಧ ಹೀನಾಯ ಸೋಲುಂಡ ಪಾಕಿಸ್ತಾನ

    ದುಬೈ: ಇಲ್ಲಿನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಐದನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 6 ವಿಕೆಟ್‌ಗಳ ಭರ್ಜರಿ ಗೆಲುವನ್ನು ಕಂಡಿದೆ. ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿದ ಭಾರತ ಟೂರ್ನಿಯಲ್ಲಿ ತನ್ನ ಎರಡನೇ ಗೆಲುವು ದಾಖಲಿಸಿದೆ.

    Advertisement

    ಈ ಬದ್ಧ ವೈರಿಗಳ ಕಾಳಗದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 49.4 ಓವರ್‌ಗಳಲ್ಲಿ 241 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಲ್‌ಔಟ್ ಆಗಿ ಭಾರತಕ್ಕೆ 242 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ವಿರಾಟ್ ಕೊಹ್ಲಿ ಶತಕದ ನೆರವಿನಿಂದ 42.3 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 244 ರನ್‌ ಕಲೆಹಾಕಿದೆ.

    ಭಾರತದ ಪರ ಕುಲ್‌ದೀಪ್ ಯಾದವ್ 3 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ 2 ವಿಕೆಟ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಹಾಗೂ ಹರ್ಷಿತ್ ರಾಣಾ ತಲಾ ಒಂದೊಂದು ವಿಕೆಟ್ ಪಡೆದರು. ಭಾರತದ ಬೌಲಿಂಗ್ ದಾಳಿಗೆ ಪಾಕ್ ಮಂಕಾಗಿದ್ದು, ರನ್ ಗಳಿಸಲು ಪರದಾಡಿತು. ಇಡೀ ಇನ್ನಿಂಗ್ಸ್‌ನಲ್ಲಿ ಖುಷ್‌ದಿಲ್ ಷಾ ಹೊರತುಪಡಿಸಿ ಇನ್ಯಾವುದೇ ಆಟಗಾರ ಸಹ ಸಿಕ್ಸರ್ ಬಾರಿಸಲಾಗದ ಮಟ್ಟಿಗೆ ಭಾರತದ ಬೌಲಿಂಗ್ ಪಾಕ್ ಆಟಗಾರರನ್ನು ಕಾಡಿತು.

    ಭಾರತದ ಇನ್ನಿಂಗ್ಸ್: ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 20 ರನ್ ಗಳಿಸಿದರೆ, ಶುಬ್‌ಮನ್ ಗಿಲ್ 46 ರನ್ ಬಾರಿಸಿದರು. ಮೂರನೇ ವಿಕೆಟ್‌ಗೆ ಜತೆಯಾದ ಕೊಹ್ಲಿ ಹಾಗೂ ಶ್ರೇಯಸ್ ಐಯ್ಯರ್ 114 ರನ್‌ಗಳ ಜತೆಯಾಟವನ್ನಾಡುವ ಮೂಲಕ ತಂಡವನ್ನು ಗೆಲುವಿನತ್ತ ತಂದರು. ಐಯ್ಯರ್ 56 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 111 ಎಸೆತಗಳಲ್ಲಿ ಅಜೇಯ 100 ರನ್ ಬಾರಿಸಿದರು. ಇನ್ನುಳಿದಂತೆ ಹಾರ್ದಿಕ್ ಪಾಂಡ್ಯ 8 ರನ್ ಹಾಗೂ ಅಕ್ಷರ್ ಪಟೇಲ್ ಅಜೇಯ 3 ರನ್ ಬಾರಿಸಿದರು.

    ಪಾಕ್ ಪರ ಶಾಹಿನ್ ಅಫ್ರಿದಿ ಎರಡು ವಿಕೆಟ್ ಹಾಗೂ ಅಬ್ರಾರ್ ಅಹ್ಮದ್ ಮತ್ತು ಖುಷ್‌ದಿಲ್ ಷಾ ತಲಾ ಒಂದೊಂದು ವಿಕೆಟ್ ಪಡೆದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading