Friday, September 18, 2026
spot_img
More
    spot_img
    HomeLatest newsಬಿಆರ್‌ ಪಾಟೀಲ್‌ ಭ್ರಷ್ಟಾಚಾರ ಆರೋಪ, ರಾಜು ಕಾಗೆ ರಾಜೀನಾಮೆ ಬೆದರಿಕೆಗೆ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

    ಬಿಆರ್‌ ಪಾಟೀಲ್‌ ಭ್ರಷ್ಟಾಚಾರ ಆರೋಪ, ರಾಜು ಕಾಗೆ ರಾಜೀನಾಮೆ ಬೆದರಿಕೆಗೆ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

    ಬೆಂಗಳೂರು: ಕಾಂಗ್ರೆಸ್‌‍ ಶಾಸಕರ ಅಸಮಾಧಾನವನ್ನು ನಾನು ಬಗೆಹರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (siddaramaiah) ಹೇಳಿದ್ದಾರೆ.

    Advertisement

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಆರ್‌.ಪಾಟೀಲ್‌ ಅವರನ್ನು ರಾಯಚೂರಿಗೆ ಆಗಮಿಸಲು ನಾನು ಕರೆದಿದ್ದೆ. ಆದರೆ ಕಾರ್ಯಕ್ರಮಕ್ಕೆ ನನಗೆ ಆಹ್ವಾನವಿಲ್ಲ. ಹಾಗಾಗಿ ಬರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದೇ 25ಕ್ಕೆ ಬಂದು ತಮ್ಮನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಅವರೊಂದಿಗೆ ನಾನು ಚರ್ಚೆ ಮಾಡುತ್ತೇನೆ ಎಂದರು.

    ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ನೀಡಿರುವ ಹೇಳಿಕೆ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರೊಂದಿಗೂ ಚರ್ಚೆ ಮಾಡುತ್ತೇನೆ ಎಂದರು.

    ಮುಖ್ಯಮಂತ್ರಿಯವರ ವಿಶೇಷ ಅನುದಾನ ಎಂದು ಯಾವುದೂ ಇಲ್ಲ. ಬಜೆಟ್‌ನಲ್ಲಿ ಆ ರೀತಿ ಪ್ರಸ್ತಾಪಗಳಿರುವುದಿಲ್ಲ. ರಾಜು ಕಾಗೆ ಅವರಿಗೆ ಮುಖ್ಯಮಂತ್ರಿಯವರ ವಿಶೇಷ ಅನುದಾನ ಎಂದು ಯಾವ ರೂಪದಲ್ಲಿ ಕೊಡಲಾಗಿದೆಯೋ ಗೊತ್ತಿಲ್ಲ. ಅಗತ್ಯ ಇರುವ ಕಡೆಗೆ ವಿಶೇಷವಾಗಿ ಅನುದಾನ ನೀಡಬೇಕಾಗುತ್ತದೆ. ಆದರೆ ಮುಖ್ಯಮಂತ್ರಿಯವರ ಅನುದಾನ ಎಂದು ಯಾವುದೂ ಇಲ್ಲ ಎಂದರು.

    ಅಕ್ರಮ ಗಣಿಗಾರಿಕೆಗೆ ಸಂಬಂಧಪಟ್ಟಂತೆ ಸಚಿವ ಎಚ್‌.ಕೆ.ಪಾಟೀಲ್‌ ಪತ್ರ ಬರೆದು ವಿಶೇಷ ನ್ಯಾಯಾಲಯ ಸ್ಥಾಪಿಸಿ ಬೊಕ್ಕಸಕ್ಕಾಗಿರುವ ನಷ್ಟವನ್ನು ವಸೂಲಿ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ವಿಷಯ ಚರ್ಚೆ ನಡೆಸುವಂತೆ ಸಲಹೆ ನೀಡಿದ್ದಾರೆ ಎಂದರು.

    ಈ ಹಿಂದೆ ಲೋಕಾಯುಕ್ತರಾಗಿದ್ದ ಸಂತೋಷ್‌ ಹೆಗ್ಡೆ ಅಕ್ರಮ ಗಣಿಗಾರಿಕೆಯ ಬಗ್ಗೆ ವರದಿ ನೀಡಿದ್ದರು. ಅದನ್ನು ನಾನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದಾಗ ಸರಿಯಾದ ಉತ್ತರ ಸಿಗಲಿಲ್ಲ. ಚರ್ಚೆಯ ವೇಳೆ ಬಿಜೆಪಿಯ ಶ್ರೀರಾಮಲು, ಜನಾರ್ಧನರೆಡ್ಡಿ ಮತ್ತಿತರರು ನೀವು ಬಳ್ಳಾರಿಗೆ ಬನ್ನಿ, ನೋಡಿಕೊಳ್ಳುತ್ತೇವೆ ಎಂದು ಸವಾಲು ಹಾಕಿದ್ದರು. ಅದನ್ನು ಸ್ವೀಕರಿಸಿದ ನಾನು ನಡೆದುಕೊಂಡೇ ಬಳ್ಳಾರಿಗೆ ಬರುತ್ತೇನೆ ಎಂದು ಹೇಳಿ ಪಾದಯಾತ್ರೆ ನಡೆಸಿದ್ದಾಗಿ ಸಿದ್ದರಾಮಯ್ಯ ತಿಳಿಸಿದರು.

    ಕೃಷಿ ಎಐ ವೆಬ್‌ಸೈಟ್‌ಗೆ ಇಲ್ಲಿ ಕ್ಲಿಕ್‌ ಮಾಡಿ

    ಧರ್ಮಸ್ಥಳ: ಅತ್ಯಾಚಾರ, ಕೊಲೆಯಾದ ಮೃತದೇಹಗಳನ್ನು ಹೊರತೆಗೆದು ಶರಣಾಗುತ್ತೇನೆ ಎಂದ ವ್ಯಕ್ತಿ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading