ಕೊಪ್ಪಳ: ಇಂದಿನಿಂದ ( ಜುಲೈ 23 ) ಧರ್ಮಸ್ಥಳದಲ್ಲಿ ಸರಣಿ ಕೊಲೆ ಪ್ರಕರಣದ ಎಸ್ಐಟಿ ತನಿಖೆ ಆರಂಭವಾಗಿದೆ. ಈ ಹಿಂದೆ ಧರ್ಮಸ್ಥಳದಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ತಾನೇ ಕೊಲೆಯಾದ ಹೆಣಗಳನ್ನು ಹೂತಿದ್ದು ಅವುಗಳನ್ನು ಅಗೆದು ತೋರಿಸಲು ಸಿದ್ಧ ಎಂದಿದ್ದು, ಆ ದೂರಿನ ಮೇರೆಗೆ ರಾಜ್ಯ ಸರ್ಕಾರ ಈ ಎಸ್ಐಟಿಯನ್ನು ರಚಿಸಿದೆ.
ಒಂದೆಡೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದ್ದರೆ, ಮತ್ತೊಂದೆಡೆ ಕೆಲ ಬಿಜೆಪಿ ನಾಯಕರು ಇದರ ವಿರುದ್ಧ ಮಾತನಾಡಿದ್ದಾರೆ. ಇದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧಕ್ಕೆಯುಂಟಾಗಬಾರದು ಎಂದಿದ್ದಾರೆ.
ಇನ್ನು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಈ ಕುರಿತು ಮಾತನಾಡಿದ್ದು, ಎಸ್ಐಟಿ ರಚಿಸಲಿ ತನಿಖೆಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇವೆ ಎಂದು ಈ ಹಿಂದೆಯೇ ಧರ್ಮಾಧಿಕಾರಿಗಳು ಹೇಳಿದ್ದಾರೆ, ಅವರೇ ಸ್ವಾಗತ ಮಾಡಿದ್ದಾರೆ ಎಂದರು.
ಅಲ್ಲದೇ ಹಿಂದೂ ಧರ್ಮ, ಜೈನ ಧರ್ಮ, ಸಿಖ್ ಹಾಗೂ ಬೌದ್ಧ ಧರ್ಮಗಳೆಲ್ಲವೂ ಭಾರತ ನೆಲದಲ್ಲಿ ಹುಟ್ಟಿದ ಧರ್ಮಗಳು ಇವುಗಳ ದೇವಾಲಯದ ಮೇಲೆ ಯಾವುದೇ ಹಾನಿಯುಂಟಾಗಬಾರದು, ಈ ಹಿಂದೆ ಶಬರಿಮಲೆ ಅಯ್ಯಪ್ಪ ದೇವಸ್ಥಾನವನ್ನು ಟಾರ್ಗೆಟ್ ಮಾಡಿದರು, ಆ ರೀತಿ ಇಲ್ಲಿ ಆಗಬಾರದು ಎಂದರು.
ಭೂಮಿಯ ಮೇಲೆ ನಡೆಯಲು ಕಲಿಯುತ್ತಿರುವ ಶುಭಾಂಶು ಶುಕ್ಲಾ
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


