ಬೆಂಗಳೂರು : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಮೈಸೂರು, ಬಳ್ಳಾರಿ, ಬೆಂಗಳೂರು,ಕೊಪ್ಪಳ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.ಮೈಸೂರಿನ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಅಧಿಕಾರಿಗಳ ನಿವಾಸಗಳಲ್ಲಿ ಬ್ಯಾಂಕ್ ಡಾಕ್ಯುಮೆಂಟ್, ಆಸ್ತಿ ದಾಖಲೆ, ಲೆಕ್ಕಪತ್ರಗಳು ಮತ್ತು ಆರ್ಥಿಕ ವ್ಯವಹಾರ ಸಂಬಂಧಿತ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದೆ
*ಮೈಸೂರಿನ ಸಿದ್ಧಾರ್ಥ್ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
*ಸಾತಗಳ್ಳಿಯ ಜೆಪಿ ನಗರದಲ್ಲಿರುವ ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಸ್ವಾಮಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
*ಕೊಪ್ಪಳ: ನಗರದ ನಿವಾಸಿಯಾಗಿರುವ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ ಆ್ಯಂಡ್ ಕಮರ್ಷಿಯಲ್ ಉಪ ನಿರ್ದೇಶಕ ಶೇಕು ಚವ್ವಾಣ್ ಅವರ ಮನೆ ಮೇಲೆ ಬುಧವಾರ ಬೆಳಗ್ಗಿನ ಜಾವ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದ್ದಾರೆ
*ಬಳ್ಳಾರಿಯಲ್ಲಿ ಮೂರು ಕಡೆ ಲೋಕಾಯುಕ್ತ ದಾಳಿ;ಬಳ್ಳಾರಿ ನಗರದ ಮೂರು ಕಡೆ ಲೂಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರು ಟೌನ್ ಮತ್ತು ರೂರ್ಲ್ ಪ್ಲ್ಯಾನಿಂಗ್ ಆಫೀಸರ್ ಮಾರುತಿ ಬಗಲಿಗೆ ಸಂಬಂಧಿಸಿದ ಮೂರು ರಾಜಕೀಯ ಆಸ್ತಿಗಳ ಮೇಲೆ ಬೆಂಗಳೂರು ಲೋಕಾಯುಕ್ತ ತಂಡವು ತನಿಖೆ ನಡೆಸಿದ್ದು, ಆಸ್ತಿ ಗಳಿಕೆ ಆರೋಪಗಳ ಕುರಿತ ದಾಖಲಾತಿ ಪರಿಶೀಲನೆ ನಡೆದಿದೆ.
ಬೆಂಗಳೂರು ನಂದಿನಿ ಬೂತ್ಗೆ ರೂ.1 ಕೋಟಿ 3 ಲಕ್ಷ ತೆರಿಗೆ ನೋಟಿಸ್
ಕೃಷಿ ಎಐ ಕನ್ನಡ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


