Wednesday, September 2, 2026
spot_img
More
    spot_img
    HomeLatest newsಓಲೈಕೆ ರಾಜಕಾರಣದಿಂದ ಲಾಭಕ್ಕಿಂತ ನಷ್ಟವೇ ಜಾಸ್ತಿ: ಸಿಎಂ ಸಿದ್ದರಾಮಯ್ಯ

    ಓಲೈಕೆ ರಾಜಕಾರಣದಿಂದ ಲಾಭಕ್ಕಿಂತ ನಷ್ಟವೇ ಜಾಸ್ತಿ: ಸಿಎಂ ಸಿದ್ದರಾಮಯ್ಯ

    ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಹೀಗಿದೆ.

    Advertisement

    ಈ ದಿನ ದಸರಾ ಮಹೋತ್ಸವವನ್ನು ಬಾನು ಮುಷ್ತಾಕ್‌ ಅವರು ಉದ್ಘಾಟನೆ ಮಾಡಿದ್ದಾರೆ. ನಾವು ಎಲ್ಲರೊಂದಿಗೆ ಪರಸ್ಪರ ಪ್ರೀತಿಯಿಂದ ಇರಬೇಕು. ಪರಸ್ಪರ ದ್ವೇಷದಿಂದ ಇರಬಾರದು. ಅದು ಮನುಷ್ಯತ್ವದ ಲಕ್ಷಣವಲ್ಲ ಎಂದರು.

    ಎಲ್ಲರೂ ಇತಿಹಾಸ ತಿಳಿದುಕೊಳ್ಳಬೇಕು. ಎಲ್ಲರೂ ಸಂವಿಧಾನದ ಮಹತ್ವ ತಿಳಿದುಕೊಳ್ಳಬೇಕು. ಯಾರೂ ಕೂಡ ರಾಜಕೀಯ ಮಾಡಬಾರದು. ರಾಜಕೀಯ ಮಾಡುವುದಾದರೂ ಚುನಾವಣೆ ಸಂದರ್ಭದಲ್ಲಿ ಮಾಡಬೇಕು. ಯಾರನ್ನೋ ಓಲೈಕೆಗೋಸ್ಕರ ರಾಜಕಾರಣ ಮಾಡಬಾರದು. ಓಲೈಕೆ ರಾಜಕಾರಣದಿಂದ ನಷ್ಟವೇ ಜಾಸ್ತಿ ಎಂದು ಅಸಮಾಧಾನ ಹೊರಹಾಕಿದರು.

    ಲೇಖಕಿ ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆ ಮಾಡುವ ಮೂಲಕ ಕನ್ನಡ ನಾಡಿಗೆ ಗೌರವ ತಂದುಕೊಟ್ಟಂತಾಗಿದೆ ಎಂದು ಬಾನು ಮುಷ್ತಾಕ್‌ ಅವರನ್ನು ಹಾಡಿ ಹೊಗಳಿದರು.

    ಈ ಬಾರಿ ದಸರಾ ಮಹೋತ್ಸವ 11 ದಿನಗಳ ಕಾಲ ನಡೆಯುತ್ತದೆ. ಈ ಬಾರಿ ವಿಶೇಷವಾಗಿ ದಸರಾ ನಡೆಯಲಿದೆ. ಶಾಸ್ತ್ರೋಕ್ತವಾಗಿಯೇ ನಾವು ದಸರಾ ಮಾಡುತ್ತಿದ್ದೇವೆ. ಈ ಬಾರಿ ಜಂಬೂಸವಾರಿಯಲ್ಲಿ ವಿಶೇಷ ಮೆರುಗು ನೀಡುವ ಕೆಲಸ ಮಾಡುತ್ತಿದ್ದೇವೆ.

    ತಾರತಮ್ಯ, ಅಸಮಾನತೆ ಹೋಗಲಾಡಿಸಲೆಂದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಎಲ್ಲಾ ಪಕ್ಷದವರೂ ಗ್ಯಾರಂಟಿ ಯೋಜನೆಗಳನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ತಾರತಮ್ಯ, ಅಸಮಾನತೆಯನ್ನು ಹೋಗಲಾಡಿಸಬೇಕು ಎಂದು ಕರೆ ನೀಡಿದರು.

    ಜಾತಿ ಗಣತಿ 2025: ನಿಮ್ಮ ಬಗ್ಗೆ ಸರ್ಕಾರ ಕೇಳುವ 60 ಪ್ರಶ್ನೆಗಳು, ದಾಖಲೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ.

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading