ಮಂಡ್ಯ: ಬಿಜೆಪಿಯ ಎಂಎಲ್ಸಿ ಸಿಟಿ ರವಿ ಕಾಂಗ್ರೆಸ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದವನ್ನು ಬಳಸಿದ ಕಾರಣ ದೂರು ದಾಖಲಾಗಿತ್ತು ಹಾಗೂ ಸಿಟಿ ರವಿ ಜೈಲಿಗೆ ಸಹ ಹೋಗಿ ಜಮೀನಿನ ಮೇಲೆ ಹೊರ ಬಂದಿದ್ದಾರೆ.
ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್ ರಾಷ್ಟ್ರಪತಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಒಂದು ಕಡೆ ಈ ಪ್ರಕರಣವಾದರೆ ಅತ್ತ ಬಿಜೆಪಿ ಕಾರ್ಯಕರ್ತರು ಆರು ವರ್ಷಗಳ ಹಿಂದೆ ಸಿಎಂ ಸಿದ್ದರಾಮಯ್ಯ ಮಹಿಳೆ ಒಬ್ಬರ ವೇಲ್ ಮೇಲೆ ಕೈ ಹಾಕಿದ್ದ ಘಟನೆಯ ಸಂಬಂಧ ಇದೀಗ ದೂರು ನೀಡಿದ್ದಾರೆ.
ಹೌದು, ಮಹಿಳೆ ವೇಲ್ ಎಳೆದು ಅಪಮಾನಿಸಿದ್ದಾರೆ ಎನ್ನಲಾದ 6 ವರ್ಷದ ಹಿಂದಿನ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗಕ್ಕೆ ಆನ್ಲೈನ್ ಮೂಲಕ ಬಿಜೆಪಿ ಕಾರ್ಯಕರ್ತ ದೂರು ನೀಡಿದ್ದಾರೆ.
ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆಗಿದ್ದಾಗ ಅಂದರೆ 6 ವರ್ಷದ ಹಿಂದೆ, ಮೈಕ್ ಕಿತ್ತುಕೊಳ್ಳಲು ಹೋಗಿ ಮಹಿಳೆ ವೇಲ್ ಎಳೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮಂಡ್ಯ ಜಿಲ್ಲಾ ಬಿಜೆಪಿ ವಕ್ತಾರ ಸಿ.ಟಿ.ಮಂಜುನಾಥ್ರಿಂದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿಗೆ ದೂರು ನೀಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


