ದುಬೈ: ಇಲ್ಲಿನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಿನ್ನೆ (ಫೆಬ್ರವರಿ 23) ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದ ಐದನೇ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 49.4 ಓವರ್ಗಳಲ್ಲಿ 241 ರನ್ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಲ್ಔಟ್ ಆಗಿ ಭಾರತಕ್ಕೆ 242 ರನ್ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ಭಾರತ ವಿರಾಟ್ ಕೊಹ್ಲಿ ಶತಕದ ನೆರವಿನಿಂದ 42.3 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 244 ರನ್ ಬಾರಿಸಿತು.
ಈ ಗೆಲುವಿನೊಂದಿಗೆ ಭಾರತ ಸೆಮಿಫೈನಲ್ ಪ್ರವೇಶವನ್ನು ಬಹುತೇಕ ಖಚಿತಪಡಿಸಿಕೊಂಡರೆ, ವಿರಾಟ್ ಕೊಹ್ಲಿ ತಮ್ಮ ವೃತ್ತಿ ಜೀವನದ 82ನೇ ಅಂತರರಾಷ್ಟ್ರೀಯ ಶತಕವನ್ನು ಬಾರಿಸಿದರು. ಕೊಹ್ಲಿ ಶತಕವನ್ನು ಪಾಕ್ ಗೆಲುವಿನಷ್ಟೇ ದೊಡ್ಡ ಮಟ್ಟದಲ್ಲಿ ಎಲ್ಲೆಡೆ ಸಂಭ್ರಮಿಸಲಾಯಿತು.
ದೇಶದ ವಿವಿಧೆಡೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಗಿದೆ. ದೇಶದಲ್ಲಿ ಮಾತ್ರವಲ್ಲದೇ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲೂ ಸಹ ಕೊಹ್ಲಿ ಸೆಂಚುರಿಯನ್ನು ಯುವಕ – ಯುವತಿಯರು ಸಂಭ್ರಮಿಸಿದ್ದಾರೆ. ಇನ್ನು ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಪಂದ್ಯದ ಕುರಿತಾಗಿ ನಡೆಯುತ್ತಿದ್ದ ಕಾಮೆಂಟರಿ ಕಾರ್ಯಕ್ರಮವೊಂದರಲ್ಲಿ ನಿರತರಾಗಿದ್ದರೂ ಸಹ ಆ ಸ್ಥಳದಲ್ಲೇ ಕುಳಿತು ಶಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


