Tuesday, September 1, 2026
spot_img
More
    spot_img
    HomeSportsCricketAsia Cup 2025: ಪಾಕ್‌ ಎದುರು ಸೋತು ಟೂರ್ನಿಯಿಂದ ಹೊರಬಿದ್ದ ಲಂಕಾ; ಫೈನಲ್‌ಗೆ 2 ತಂಡಗಳ...

    Asia Cup 2025: ಪಾಕ್‌ ಎದುರು ಸೋತು ಟೂರ್ನಿಯಿಂದ ಹೊರಬಿದ್ದ ಲಂಕಾ; ಫೈನಲ್‌ಗೆ 2 ತಂಡಗಳ ನಡುವೆ ಜಟಾಪಟಿ!

    ಅಬುಧಾಬಿ: ಪ್ರಸ್ತುತ ನಡೆಯುತ್ತಿರುವ ಏಷ್ಯಾ ಕಪ್‌ 2025 ( Asia Cup 2025 ) ಟೂರ್ನಿಯಿಂದ ಶ್ರೀಲಂಕಾ ಹೊರಬಿದ್ದಿದೆ. ನಿನ್ನೆ ( ಸೆಪ್ಟೆಂಬರ್‌ 23 ) ಅಬುಧಾಬಿಯ ಶೈಖ್‌ ಜಾಯೆದ್‌ ಕ್ರೀಡಾಂಗಣದಲ್ಲಿ ನಡೆದ ಸೂಪರ್‌ 4 ಹಂತದ ಪಂದ್ಯದಲ್ಲಿ ಪಾಕಿಸ್ತಾನ ಶ್ರೀಲಂಕಾ ವಿರುದ್ಧ 5 ವಿಕೆಟ್‌ಗಳ ಗೆಲುವನ್ನು ದಾಖಲಿಸಿದೆ.

    Advertisement

    ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 133 ರನ್‌ ಗಳಿಸಿ ಪಾಕ್‌ಗೆ 134 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ಪಾಕಿಸ್ತಾನ 18 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 138 ರನ್‌ ಕಲೆಹಾಕಿತು.

    ಈ ಹಿಂದೆ ಬಾಂಗ್ಲಾದೇಶದ ವಿರುದ್ಧ ಸೂಪರ್‌ 4 ಹಂತದ ಪಂದ್ಯ ಸೋತಿದ್ದ ಶ್ರೀಲಂಕಾ ಈ ಪಂದ್ಯವನ್ನೂ ಸಹ ಸೋಲುವ ಮೂಲಕ ಆಡಿದ ಎರಡೂ ಪಂದ್ಯಗಳಲ್ಲೂ ಪರಾಭವಗೊಂಡು ಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಳ್ಳುವಲ್ಲಿ ವಿಫಲವಾಗಿದೆ. ಕಳೆದ ಸೂಪರ್‌ 4 ಪಂದ್ಯದಲ್ಲಿ ಭಾರತದ ವಿರುದ್ಧ ಸೋತ ಪಾಕಿಸ್ತಾನ ಈ ಗೆಲುವಿನ ಮೂಲಕ ಫೈನಲ್‌ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

    ಇನ್ನು ಶ್ರೀಲಂಕಾವನ್ನು ಮಣಿಸಿರುವ ಬಾಂಗ್ಲಾದೇಶಕ್ಕೂ ಸಹ ಫೈನಲ್‌ ಪ್ರವೇಶಿಸುವ ಅವಕಾಶ ಹೆಚ್ಚಿದೆ. ಇಂದು ( ಸೆಪ್ಟೆಂಬರ್‌ 24 ) ನಡೆಯಲಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಸೂಪರ್‌ 4 ಹಂತದ ಪಂದ್ಯ ಈ ಕಾರಣಕ್ಕಾಗಿ ರೋಚಕತೆಯಿಂದ ಕೂಡಿರಲಿದ್ದು, ನಾಳೆ ( ಸೆಪ್ಟೆಂಬರ್‌ 25 ) ನಡೆಯಲಿರುವ ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ಯಾವ ತಂಡ ಫೈನಲ್‌ ಪ್ರವೇಶಿಸಲಿದೆ ಎಂಬುದನ್ನು ನಿರ್ಧರಿಸಲಿದೆ.

    ಮೈಸೂರು ದಸರಾ 2025: ಗಜಪಡೆಗೆ ಅಂತಿಮ ಹಂತದ ಸಿಡಿಮದ್ದು ತಾಲೀಮು

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading