Monday, August 31, 2026
spot_img
More
    spot_img
    HomeStateDistrictಮೈಸೂರು ದಸರಾಗೆ ಆಗಮಿಸುವವರಿಗೆ ಗುಡ್‌ನ್ಯೂಸ್;‌ 51 ವಿಶೇಷ ರೈಲುಗಳ ಆಯೋಜನೆ

    ಮೈಸೂರು ದಸರಾಗೆ ಆಗಮಿಸುವವರಿಗೆ ಗುಡ್‌ನ್ಯೂಸ್;‌ 51 ವಿಶೇಷ ರೈಲುಗಳ ಆಯೋಜನೆ

    ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾಗೆ ಆಗಮಿಸುವ ನಾಡ ಜನತಗೆ ರೈಲ್ವೆ ಇಲಾಖೆಯಿಂದ ಬಿಗ್‌ ಗಿಫ್ಟ್‌ ನೀಡಲಾಗಿದೆ.

    Advertisement

    ಮೈಸೂರು ದಸರಾ ಮಹೋತ್ಸವವನ್ನು ನೋಡಲು ರಾಜ್ಯ ಹಾಗೂ ಹೊರ ರಾಜ್ಯದಿಂದ ಲಕ್ಷಾಂತರ ಜನರು ಮೈಸೂರಿಗೆ ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ ಮೈಸೂರಿಗೆ ಬರುವವರಿಗೆ 51 ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದ್ದು, ಎಂದಿನಂತೆ ಸಂಚರಿಸುವ ರೈಲುಗಳಿಗಿಂತ 51 ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ.

    ರೈಲ್ವೆ ಇಲಾಖೆ 11 ಅನ್ ರಿಸರ್ವ್ಡ್ ಟ್ರೈನ್‌ಗಳ ವ್ಯವಸ್ಥೆ ಮಾಡಿದ್ದು, ಜನಸಂದಣಿಯ ಅವಶ್ಯಕತೆಗೆ ತಕ್ಕಂತೆ ಬೋಗಿಗಳ ವ್ಯವಸ್ಥೆ ಕಲ್ಪಿಸಲಾಗಿದೆ.

    ವಿಜಯಪುರ, ಶಿವಮೊಗ್ಗ, ಧಾರವಾಡ, ಚಾಮರಾಜನಗರ ಹಾಗೂ ತಮಿಳುನಾಡು, ಮಡಗಾಂವ್, ರಾಮನಾಥಪುರಂದಿಂದ ರೈಲಿನ ವ್ಯವಸ್ಥೆ ಮಾಡಲಾಗಿದ್ದು, ಪ್ರಯಾಣಿಕರ ದರ ಹಾಗೂ ಸಮಯವನ್ನು ಪ್ರತಿ ರೈಲ್ವೆ ನಿಲ್ದಾಣದಲ್ಲಿ ಹಾಕಲಾಗಿರುತ್ತದೆ. ಮಹಿಳೆಯರು, ಮಕ್ಕಳು ಹಾಗೂ ವೃದ್ಧರ ಆರೋಗ್ಯದಲ್ಲಿ ಸಮಸ್ಯೆಯಾದ್ರೆ ಪ್ಲಾಟ್ ಫಾಮ್ 1ರಲ್ಲಿ ಪ್ರತ್ಯೇಕ ಕ್ಲಿನಿಕ್ ವ್ಯವಸ್ಥೆ ಕಲ್ಪಿಸಲಾಗಿದೆ.

    ರೈಲ್ವೆ ನಿಲ್ದಾಣದಲ್ಲಿ 150 ಜಿ.ಆರ್.ಪಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, 50 ಸಿಸಿಟಿವಿ ಕ್ಯಾಮರಗಳನ್ನು ಅಳವಡಿಸಲಾಗಿದೆ. ಈ ಕುರಿತು ರೈಲ್ವೆ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರಾದ ಗಿರೀಶ ಧರ್ಮರಾಜ ಕಲಗೊಂಡ ಮಾಹಿತಿ ನೀಡಿದ್ದಾರೆ.

    ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜುಗೆ ಸಂಕಷ್ಟ

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading