Monday, March 30, 2026
spot_img
More
    spot_img
    HomeLatest newsಪೂರ್ಣ ಅವಧಿಗೆ ಸಿಎಂ ಸ್ಥಾನ ಡೌಟು; ಉಲ್ಟಾ ಹೊಡೆದ 5 ವರ್ಷ ನಾನೇ ಸಿಎಂ, ನಂದೇ...

    ಪೂರ್ಣ ಅವಧಿಗೆ ಸಿಎಂ ಸ್ಥಾನ ಡೌಟು; ಉಲ್ಟಾ ಹೊಡೆದ 5 ವರ್ಷ ನಾನೇ ಸಿಎಂ, ನಂದೇ ಬಜೆಟ್‌ ಎನ್ನುತ್ತಿದ್ದ ಸಿದ್ದರಾಮಯ್ಯ!

    ಚಿಕ್ಕಬಳ್ಳಾಪುರ: ರಾಜ್ಯ ಕಾಂಗ್ರೆಸ್‌ನಲ್ಲಿ ಬದಲಾವಣೆ ಗಾಳಿ ಜೋರಾಗಿ ಬೀಸುತ್ತಿದ್ದು, ಸಿದ್ದರಾಮಯ್ಯ ಬಳಿಕ ಹೊಸ ಮುಖ್ಯಮಂತ್ರಿಯ ಆಗಮನವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

    ಡಿಕೆ ಶಿವಕುಮಾರ್‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ್ದು ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಪರ ಶಾಸಕರು ಸಿಎಂ ನಿವಾಸಕ್ಕೆ ಭೇಟಿ ನೀಡಲಾರಂಭಿಸಿದ್ದಾರೆ.

    ಈ ಎಲ್ಲ ಬೆಳವಣಿಗೆಗಳು ಸಿಎಂ ಬದಲಾವಣೆ ಚರ್ಚೆ ಸುಳ್ಳಲ್ಲ ಎಂಬುದನ್ನು ತಿಳಿಸುತ್ತಿವೆ. ಇನ್ನು ಈ ಕುರಿತು ಸ್ವತಃ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಹೈಕಮಾಂಡ್‌ ತೀರ್ಮಾನವೇ ಅಂತಿಮ ತೀರ್ಮಾನ ಎಂದು ಮತ್ತೊಮ್ಮೆ ಹೇಳಿದ್ದಾರೆ.

    ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ಈ ಕುರಿತು ಮಾತನಾಡಿದ ಸಿದ್ದರಾಮಯ್ಯ ನಮ್ಮಲ್ಲಿ ಹೈಕಮಾಂಡ್‌ ಇದೆ, ಅವರ ತೀರ್ಮಾನವೇ ಅಂತಿಮ ಎಂದರು. ಹೈಕಮಾಂಡ್‌ನವರು ನಾನೇ ಮುಂದುವರಿಯಲಿ ಎಂದರೆ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ, ಹೈಕಮಾಂಡ್‌ ಹೇಳಿದ್ದನ್ನು ನಾನೂ ಕೇಳಬೇಕು, ಡಿಕೆ ಸಹ ಕೇಳಬೇಕು ಎಂದು ತಿಳಿಸಿದರು.

    ಈ ಮೂಲಕ ಸಿದ್ದರಾಮಯ್ಯ ಮೊನ್ನೆಯಷ್ಟೇ ತಾವು ನೀಡಿದ ಹೇಳಿಕೆಯ ದೃಷ್ಟಿಕೋನದಲ್ಲಿ ಉಲ್ಟಾ ಹೊಡೆದಿದ್ದಾರೆ. 5 ವರ್ಷ ನಾನೇ ಸಿಎಂ, ಎರಡು ವರ್ಷ ನಾನೇ ಬಜೆಟ್‌ ಮಂಡಿಸಲಿದ್ದೇನೆ ಎಂದಿದ್ದ ಸಿದ್ದರಾಮಯ್ಯ ಇದೀಗ ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ ಎಂದು ಹೇಳಿಕೆ ನೀಡಿದ್ದು, ಬದಲಾವಣೆಯ ಕುರಿತು ಕುತೂಹಲ ಮೂಡಿಸಿದ್ದಾರೆ.

    ಚನ್ನಪಟ್ಟಣ: ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ; ರೆಡ್‌ಹ್ಯಾಂಡ್‌ ಆಗಿ ಪತ್ನಿಗೆ ಸಿಕ್ಕಿಬಿದ್ದ ಪಾಪಿ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್ರಾ! ಮನವಮಿ ಹಬ್ಬಕ್ಕೆ ಮಾರುಕಟ್ಟೆ ಬಂದ್ ಆಗುತ್ತಾ? ಹೂಡಿಕೆದಾರರಿಗೆ ಕ್ಲಿಯರ್ ಮಾಹಿತಿ!

    “ಸ್ಟಾಕ್ ಮಾರ್ಕೆಟ್ ಹಾಲಿಡೇ 2026” ಇದೀಗ ಹೂಡಿಕೆದಾರರಲ್ಲಿ ದೊಡ್ಡ ಗೊಂದಲ ಮೂಡಿಸಿದೆ. ರಾಮನವಮಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ಅಥವಾ ಶುಕ್ರವಾರ ಷೇರು ಮಾರುಕಟ್ಟೆ ಬಂದ್ ಆಗುತ್ತದೆಯಾ? ಎಂಬ ಪ್ರಶ್ನೆ ಟ್ರೇಡರ್‌ಗಳ ನಡುವೆ ಭಾರೀ...

    ಬ್ರೇಕಿಂಗ್! ಮಾರುಕಟ್ಟೆ ರಾಕೆಟ್—ಸೆನ್ಸೆಕ್ಸ್ 1300 ಪಾಯಿಂಟ್ ಜಿಗಿತ! ರೂಪಾಯಿ ಕುಸಿತ, ಚಿನ್ನ ಏರಿಕೆ… ಏನಿದು ಮಿಶ್ರ ಸಿಗ್ನಲ್?

    “ಸ್ಟಾಕ್ ಮಾರ್ಕೆಟ್ 24 ಮಾರ್ಚ್ 2026” ಹೂಡಿಕೆದಾರರಿಗೆ ಒಂದೇ ದಿನದಲ್ಲಿ ರೋಲರ್ ಕೋಸ್ಟರ್ ಅನುಭವ ನೀಡಿದೆ! ಒಂದೆಡೆ ಷೇರು ಮಾರುಕಟ್ಟೆ ಭರ್ಜರಿ ಏರಿಕೆ ಕಂಡಿದ್ದರೆ, ಇನ್ನೊಂದೆಡೆ ರೂಪಾಯಿ ಕುಸಿತ ಮತ್ತು ಚಿನ್ನದ ಬೆಲೆ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading