Sunday, August 30, 2026
spot_img
More
    spot_img
    HomeLatest newsಗೃಹಲಕ್ಷ್ಮಿ ಬಗ್ಗೆ ಸುಳ್ಳು ಮಾಹಿತಿ: ಸರ್ಕಾರದ ಬಳಿ ಮಾಹಿತಿ ಕೇಳಿದ ಆರ್.ಅಶೋಕ

    ಗೃಹಲಕ್ಷ್ಮಿ ಬಗ್ಗೆ ಸುಳ್ಳು ಮಾಹಿತಿ: ಸರ್ಕಾರದ ಬಳಿ ಮಾಹಿತಿ ಕೇಳಿದ ಆರ್.ಅಶೋಕ

    ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ಬಿಡುಗಡೆ ವಿಚಾರ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಅಂತಿಮವಾಗಿ ಹಣ ಬಾಕಿ ಇದ್ದು, ಬಿಡುಗಡೆ ಮಾಡಲಾಗುತ್ತದೆ ಎಂದು ಸರ್ಕಾರ ಹೇಳಿತ್ತು.

    Advertisement

    ಈಗ ಪ್ರತಿಪಕ್ಷ ನಾಯಕ ಆರ್.ಅಶೋಕ ಈ ಕುರಿತು ಹಣಕಾಸು ಇಲಾಖೆಗೆ ಪತ್ರವನ್ನು ಬರೆದಿದ್ದಾರೆ. ಬೆಳಗಾವಿಯ ವಿಧಾನಮಂಡಲ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಪಾವತಿ ಬಗ್ಗೆ ಸುಳ್ಳು ಮಾಹಿತಿ ನೀಡಿದಾಗಿನಿಂದಲೂ ಗ್ಯಾರೆಂಟಿ ಯೋಜನೆಯ ಹಣದಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ, ಅವ್ಯವಹಾರ, ಅಕ್ರಮ ನಡೆಯುತ್ತಿರುವ ಅನುಮಾನವಿದೆ ಎಂದು ಹೇಳಿದ್ದಾರೆ.

    ಈ ನಿಟ್ಟಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಬಜೆಟ್ ಅನುದಾನ ಹಂಚಿಕೆ ಸೇರಿದಂತೆ ಸಂಬಂಧಪಟ್ಟ ಅಂಕಿ-ಅಂಶಗಳ ಬಗ್ಗೆ ಅಧಿಕೃತ ಮಾಹಿತಿ ನೀಡುವಂತೆ ಕೋರಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅಶೋಕ ಅವರು, ‘ಸತ್ಯದ ಮೇಲೆ ಪ್ರಮಾಣ ವಚನ ಸ್ವೀಕರಿಸಿರುವ ಮುಖ್ಯಮಂತ್ರಿಗಳು ನನ್ನ ಪ್ರಶ್ನೆಗಳಿಗೆ ಪ್ರಾಮಾಣಿಕ ಉತ್ತರ ನೀಡಿ ಕರ್ನಾಟಕದ ಜನತೆಗೆ ಸತ್ಯ ದರ್ಶನ ಮಾಡಿಸುತ್ತಾರೆ ಎಂದು ನಂಬಿದ್ದೇನೆ’ ಎಂದು ಹೇಳಿದ್ದಾರೆ.

    ಆರ್.ಅಶೋಕ ಪತ್ರದ ವಿವರ: ವಿರೋಧ ಪಕ್ಷದ ನಾಯಕ ಆರ್.ಅಶೋಕ, ಸರ್ಕಾರದ ಪ್ರಧಾನ ಕಾರ್ಯದರ್ಶಿ, ಆರ್ಥಿಕ ಇಲಾಖೆ ಇವರಿಗೆ ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿ ಇತ್ತೀಚಿಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು 2024-25ನೇ ಸಾಲಿನ ಫೆಬ್ರವರಿ ಮತ್ತು ಮಾರ್ಚ್ ಮಾಹೆಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡದಿರುವ ಬಗ್ಗೆ ಸದನದಲ್ಲಿ ಹೇಳಿಕೆ ನೀಡಿರುತ್ತಾರೆ. ಅದರಂತೆ, ಈ ಕೆಳಕಂಡ ಅಂಶಗಳಿಗೆ ಮಾಹಿತಿ ಒದಗಿಸಲು ಕೋರಿದೆ ಎಂದು ಹೇಳಿದ್ದಾರೆ.

    • ಗೃಹಲಕ್ಷ್ಮೀ ಯೋಜನೆಗೆ 2024-25 ಬಜೆಟ್‌ನಲ್ಲಿ ಅನುದಾನ ಹಂಚಿಕೆಯಾಗಿದ್ದು, 2024-25ನೇ ಸಾಲಿನ ಫೆಬ್ರವರಿ ಮತ್ತು ಮಾರ್ಚ್ ಮಾಹೆಗಳ ಹಣವನ್ನು ಫಲಾನುಭವಿಗಳಿಗೆ ಪಾವತಿಸದಿರಲು ಕಾರಣಗಳೇನು?.
    • 2024-25ನೇ ಸಾಲಿನ ಬಜೆಟ್‌ನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಮೀಸಲಿರಿಸಿದ್ದ ಫೆಬ್ರವರಿ ಮತ್ತು ಮಾರ್ಚ್ ಕಂತಿನ ಅನುದಾನ ಏನಾಯಿತು? ಎಂಬುದರ ಸಂಪೂರ್ಣ ಮಾಹಿತಿ/ ವಿವರಗಳನ್ನು ನೀಡುವುದು.
    • 2024-25ನೇ ಸಾಲಿನ ಫೆಬ್ರವರಿ ಮತ್ತು ಮಾರ್ಚ್ ಮಾಹೆಗಳ ಗೃಹಲಕ್ಷ್ಮೀ ಯೋಜನೆಯ ಅನುದಾನವನ್ನು 2025-26ನೇ ಸಾಲಿನ ಆಯವ್ಯಯದಲ್ಲಿ ಹಂಚಿಕೆ ಮಾಡದೇ ಇರುವುದಕ್ಕೆ ಕಾರಣ ಮತ್ತು 2025-26ನೇ ಸಾಲಿನ ಪೂರಕ ಅಂದಾಜುಗಳಲ್ಲಿಯೂ ಸಹ ಅನುದಾನ ಹಂಚಿಕೆ ಮಾಡದೇ ಇರುವುದಕ್ಕೆ ಕಾರಣಗಳೇನು?.
    • ಈ ಗೃಹಲಕ್ಷ್ಮೀ ಯೋಜನೆಯು ಪ್ರಾರಂಭಗೊಂಡಾಗಿನಿಂದ ಇದುವರೆವಿಗೂ ಫಲಾನುಭವಿಗಳಿಗೆ ಪಾವತಿಸಿರುವ ಕಂತುಗಳ ವಿವರಗಳನ್ನು ಒದಗಿಸುವುದು.

    ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ಬಿಡುಗಡೆ ವಿಚಾರದ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, “ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಅನುಮೋದನೆ ಕೊಟ್ಟಿದ್ದಾರೆ. ಈ ಸೋಮವಾರದಿಂದ ಶನಿವಾರದೊಳಗೆ ಮಹಿಳೆಯರ ಖಾತೆಗೆ ಹಣ ಜಮೆಯಾಗುತ್ತದೆ” ಎಂದು ಹೇಳಿದ್ದಾರೆ.

    ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 2 ತಿಂಗಳ ಹಣ ಬಿಡುಗಡೆ ಆಗಿಲ್ಲ ಎಂಬುದು ಬೆಳಗಾವಿ ಅಧಿವೇಶನದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ವಿರೋಧ ಪಕ್ಷವಾದ ಬಿಜೆಪಿ ಈ ಕುರಿತು ವಿಚಾರವನ್ನು ಪ್ರಸ್ತಾಪಿಸಿತ್ತು.

    ಮೊದಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಣ ಬಿಡುಗಡೆಯಾಗಿದೆ ಎಂದು ಹೇಳಿದ್ದರು. ಪರಿಶೀಲನೆ ಬಳಿಕ ಎರಡು ತಿಂಗಳ ಹಣ ಬಿಡುಗಡೆಯಾಗಿಲ್ಲ ಎಂಬ ವಿಚಾರವನ್ನು ಸಚಿವರು ಸದನದಲ್ಲಿಯೇ ಒಪ್ಪಿಕೊಂಡಿದ್ದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading