Saturday, September 19, 2026
spot_img
More
    spot_img
    HomeTop StoryIPL 2025: ಇನ್ನುಳಿದ ಐದಾರು ಪಂದ್ಯಗಳಲ್ಲಿ ಯಾವ ತಂಡ ಎಷ್ಟು ಗೆದ್ದರೆ ಪ್ಲೇಆಫ್?‌ ಈ ತಂಡಕ್ಕೆ...

    IPL 2025: ಇನ್ನುಳಿದ ಐದಾರು ಪಂದ್ಯಗಳಲ್ಲಿ ಯಾವ ತಂಡ ಎಷ್ಟು ಗೆದ್ದರೆ ಪ್ಲೇಆಫ್?‌ ಈ ತಂಡಕ್ಕೆ ಸಾಧ್ಯವೇ ಇಲ್ಲ!

    ಪ್ರಸ್ತುತ ನಡೆಯುತ್ತಿರುವ ಹದಿನೆಂಟನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಲೀಗ್‌ ಹಂತದ 42 ಪಂದ್ಯಗಳು ನಿನ್ನೆ ( ಏಪ್ರಿಲ್‌ 24 ) ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ರಾಜಸ್ಥಾನ್‌ ರಾಯಲ್ಸ್‌ ತಂಡಗಳ ನಡುವಿನ ಪಂದ್ಯದ ಮೂಲಕ ಮುಕ್ತಾಯವಾದವು.

    Advertisement

    ಈ ಪಂದ್ಯದಲ್ಲಿ ಗೆದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಎರಡು ಅಂಕ ಸಂಪಾದಿಸುವ ಮೂಲಕ ಒಟ್ಟು 12 ಅಂಕಗಳನ್ನು ಪಡೆದುಕೊಂಡಿದ್ದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಇನ್ನು ಸೋತ ರಾಜಸ್ಥಾನ್‌ ರಾಯಲ್ಸ್‌ ಏಳನೇ ಸೋಲನ್ನು ಕಾಣುವ ಮೂಲಕ ಕೇವಲ ಎರಡು ಪಂದ್ಯಗಳಲ್ಲಿ ಗೆದ್ದು 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನಕ್ಕೆ ಕುಸಿದಿದೆ.

    ಈ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪ್ಲೇಆಫ್‌ಗೆ ಇನ್ನಷ್ಟು ಸನಿಹವಾಗಿದೆ. ಈ ಪಂದ್ಯದ ಮುಕ್ತಾಯದ ಬಳಿಕ ಎಲ್ಲ ತಂಡಗಳಿಗೂ ಆಡಲು ಇನ್ನು 5 ಹಾಗೂ 6 ಪಂದ್ಯಗಳು ಮಾತ್ರ ಬಾಕಿ ಇದ್ದು, ಈ ಪೈಕಿ ಪ್ಲೇಆಫ್‌ ಪ್ರವೇಶಿಸಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂಬ ಮಾಹಿತಿ ಈ ಕೆಳಕಂಡಂತಿದೆ..

    ಸದ್ಯದ ಪರಿಸ್ಥಿತಿಯಲ್ಲಿ ಪ್ಲೇಆಫ್‌ ಪ್ರವೇಶಿಸಲು ಪ್ರತಿ ಬಾರಿಯ ಹಾಗೆ ಈ ಬಾರಿಯೂ ಸಹ ಕನಿಷ್ಟ 16 ಅಂಕ ಅತ್ಯಗತ್ಯ ಎಂದುಕೊಂಡರೂ

    ಗುಜರಾತ್‌ ಟೈಟನ್ಸ್‌ – 6 ಪಂದ್ಯಗಳಲ್ಲಿ 2 ಪಂದ್ಯ ಲ್ಲಬೇಕು
    ಡೆಲ್ಲಿ ಕ್ಯಾಪಿಟಲ್ಸ್‌ – 6 ಪಂದ್ಯಗಳಲ್ಲಿ 2 ಪಂದ್ಯ ಗೆಲ್ಲಬೇಕು
    ಆರ್‌ಸಿಬಿ – 5 ಪಂದ್ಯಗಳಲ್ಲಿ 2 ಪಂದ್ಯ ಗೆಲ್ಲಬೇಕು
    ಪಂಜಾಬ್‌ ಕಿಂಗ್ಸ್‌ – 6 ಪಂದ್ಯಗಳಲ್ಲಿ 3 ಪಂದ್ಯ ಗೆಲ್ಲಬೇಕು
    ಮುಂಬೈ ಇಂಡಿಯನ್ಸ್‌ – 5 ಪಂದ್ಯಗಳಲ್ಲಿ 3 ಪಂದ್ಯ ಗೆಲ್ಲಬೇಕು
    ಲಕ್ನೋ ಸೂಪರ್‌ ಜೈಂಟ್ಸ್‌ – 5 ಪಂದ್ಯಗಳಲ್ಲಿ 3 ಪಂದ್ಯ ಗೆಲ್ಲಬೇಕು
    ಕೊಲ್ಕತ್ತಾ ನೈಟ್‌ ರೈಡರ್ಸ್‌ – 6 ಪಂದ್ಯಗಳಲ್ಲಿ 5 ಪಂದ್ಯ ಗೆಲ್ಲಬೇಕು
    ಸನ್‌ರೈಸರ್ಸ್‌ ಹೈದರಾಬಾದ್‌ – 6 ಪಂದ್ಯಗಳಲ್ಲಿ 6 ಪಂದ್ಯ ಗೆಲ್ಲಬೇಕು
    ಚೆನ್ನೈ ಸೂಪರ್‌ ಕಿಂಗ್ಸ್‌ – 6 ಪಂದ್ಯಗಳಲ್ಲಿ 6 ಪಂದ್ಯ ಗೆಲ್ಲಬೇಕಿದೆ.

    ಆದರೆ ರಾಜಸ್ಥಾನ್‌ ರಾಯಲ್ಸ್‌ ಈಗಾಗಲೇ 9 ಪಂದ್ಯಗಳನ್ನಾಡಿದ್ದು ಕೇವಲ 2 ಪಂದ್ಯಗಳಲಿ ಮಾತ್ರ ಗೆದ್ದಿದ್ದು ಇನ್ನುಳಿದ 5 ಪಂದ್ಯದಲ್ಲಿ ಗೆದ್ದರೂ ಒಟ್ಟು 14 ಅಂಕಗಳಾಗಲಿದ್ದು, ಪ್ಲೇಆಫ್‌ ಪ್ರವೇಶ ಸಾಧ್ಯವೇ ಇಲ್ಲ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading