ಕಲಬುರಗಿ: ಈ ಹಿಂದೆ ಬಳ್ಳಾರಿಯಲ್ಲಿ ಅಪಾರ ಗಣಿ ಹಣದಿಂದ ಇಡೀ ಬಳ್ಳಾರಿಯನ್ನು ರಿಪಬ್ಲಿಕ್ ಮಾಡಿ ಜನರ ನೆಮ್ಮದಿ ಹಾಳು ಮಾಡಿರುವ ಬಿಜೆಪಿ ಪಕ್ಷದ ನಾಯಕರು ಕಲಬುರಗಿ ರಿಪಬ್ಲಿಕ್ ಆಗಿದೆ ಎಂದರೆ ಜನ ನಂಬುತ್ತಾರೆಯೇ ಎಂದು ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಪ್ರಶ್ನಿಸಿದರು.
ಕಲಬುರಗಿ ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ನಾಯಕರು ಕಲಬುರಗಿಗೆ ಆಗಮಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ರಿಪಬ್ಲಿಕ್ ಆಫ್ ಕಲಬುರಗಿ ಆಗಿದೆ ಎಂದರೆ ರಿಪಬ್ಲಿಕ್ ಆಗುತ್ತದೆಯಾ, ಕಲಬುರಗಿ ಜಿಲ್ಲೆಯ ಜನತೆಗೆ ಕಾಂಗ್ರೆಸ್ ಇತಿಹಾಸ ಏನು ಎಂದು ಗೊತ್ತಿದೆ. ನಾವು ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಮಾಡಿದ್ದೇವೆ ಹೊರತು ರಿಪಬ್ಲಿಕ್ ಮಾಡಿಲ್ಲ. ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಿದ ರಾಮುಲು ಇಲ್ಲಿ ಬಂದು ರಿಪಬ್ಲಿಕ್ ಆಪ್ ಕಲಬುರಗಿ ಬಗ್ಗೆ ಮಾತಾಡ್ತಾರೆ ಎಂದು ಕಿಡಿಕಾರಿದರು.
ಇನ್ನು ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಲ್ಕು ಬಾರಿ ಪ್ರತಿಭಟನೆ ನಡೆಸಿದೆ. ಬಿಜೆಪಿಯವರ ಪ್ರತಿಭಟನೆಗಳು ಹಾಸ್ಯಾಸ್ಪದವಾಗಿವೆ. ಪ್ರಿಯಾಂಕ್ ಖರ್ಗೆ ಕಂಡ್ರೆ ಬಿಜೆಪಿಗೆ ಭಯ ಅನ್ನೋದು ಕಾಣಿಸ್ತಿದೆ ಎಂದು ಟಿಕಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


