ಜೈಪುರ: ಪ್ರಾಥಮಿಕ ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿದು ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್ನಲ್ಲಿ ನಡೆದಿದೆ.
ಝಲಾವರ್ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಘಟನೆಯಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಮಕ್ಕಳು ಅವಶೇಷಗಳಡಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಸ್ಥಳೀಯರು ಸಹ ಅಧಿಕಾರಿಗಳೊಂದಿಗೆ ಕೈ ಜೋಡಿಸಿದ್ದಾರೆ.
ಮೃತಪಟ್ಟ ಮಕ್ಕಳ ಶವಗಳನ್ನು ಹೊರತೆಗೆಯಲಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಇಂದು ಬೆಳಿಗ್ಗೆ 8.30ಕ್ಕೆ ಶಾಲೆ ಶುರುವಾದ ವೇಳೆ ದುರಂತ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದಿದೆ ಎಂದು ಹೇಳಲಾಗುತ್ತಿದೆ.
ಇನ್ನು ದುರಂತದಲ್ಲಿ ಮೃತಪಟ್ಟ ಮಕ್ಕಳಿಗೆ ರಾಜಸ್ಥಾನ ಸಿಎಂ ಭಜನ್ಲಾಲ್ ಶರ್ಮಾ ಎಕ್ಸ್ನಲ್ಲಿ ಸಂತಾಪ ಸೂಚಿಸಿದ್ದಾರೆ. ಈ ಈ ಘಟನೆ ನಿಜಕ್ಕೂ ಹೃದಯವಿದ್ರಾವಕವಾದದ್ದು ಎಂದು ಕಂಬನಿ ಮಿಡಿದಿದ್ದಾರೆ. ಅಲ್ಲದೇ ಗಾಯಗೊಂಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜುಲೈ 26ರಂದು ಶನಿವಾರ ಬೆಂಗಳೂರಿನ ಈ ಪ್ರದೇಶಗಳಲ್ಲಿ ಪವರ್ ಕಟ್
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


