Thursday, September 3, 2026
spot_img
More
    spot_img
    HomeLatest newsರಾಜ್ಯದಲ್ಲಿ ಯೂರಿಯಾ ಗೊಬ್ಬರ ಅಭಾವ; ಹಂಚಿಕೆಯಾದ ಗೊಬ್ಬರ ನೀಡುವಂತೆ ನಡ್ಡಾಗೆ ಸಿದ್ದರಾಮಯ್ಯ ಪತ್ರ

    ರಾಜ್ಯದಲ್ಲಿ ಯೂರಿಯಾ ಗೊಬ್ಬರ ಅಭಾವ; ಹಂಚಿಕೆಯಾದ ಗೊಬ್ಬರ ನೀಡುವಂತೆ ನಡ್ಡಾಗೆ ಸಿದ್ದರಾಮಯ್ಯ ಪತ್ರ

    ಬೆಂಗಳೂರು: ಕರ್ನಾಟಕದಲ್ಲಿ ಯೂರಿಯಾ ಗೊಬ್ಬರ ಅಭಾವ ಸೃಷ್ಟಿ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರಸಗೊಬ್ಬರ ಸಚಿವ ಜೆ.ಪಿ.ನಡ್ಡಾಗೆ ಪತ್ರ ಬರೆದು ರಾಜ್ಯಕ್ಕೆ ಹಂಚಿಕೆಯಾದ ರಸಗೊಬ್ಬರ ಪ್ರಮಾಣವನ್ನು ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.

    Advertisement

    ಪತ್ರದಲ್ಲಿ, ರಾಜ್ಯಕ್ಕೆ ಒಟ್ಟು 11.17 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಕೊಡಬೇಕಿತ್ತು. ಇಲ್ಲಿಯವರೆಗೆ 5.16 ಲಕ್ಷ ಮೆಟ್ರಿಕ್ ಟನ್ ಮಾತ್ರ ಕೊಡಲಾಗಿದೆ. ರಾಜ್ಯಕ್ಕೆ ಇನ್ನೂ 6.80 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬರಬೇಕಿದೆ. ಆದರೆ ಕೆಲ ಫರ್ಟಿಲೈಸರ್ ಕಂಪನಿಗಳು ಕೊರತೆಯ ಕಾರಣ ಹೇಳಿ ಯೂರಿಯಾ ಒದಗಿಸುತ್ತಿಲ್ಲ. ಹೀಗಾಗಿ ಕೂಡಲೇ ಯೂರಿಯಾ ಕೊಡುವಂತೆ ಒತ್ತಾಯಿಸಿದ್ದಾರೆ.

    ಕಳೆದ ವರ್ಷಕ್ಕಿಂತ ಈ ಬಾರಿ ಮುಂಗಾರು ಮಳೆ ಹೆಚ್ಚಾಗಿದೆ. ಕಾವೇರಿ, ತುಂಗಭದ್ರಾ, ಕೃಷ್ಣಾದಿಂದ ನೀರು ಬಿಡುಗಡೆಯಾಗಿದೆ. ಇದರಿಂದ ರೈತರು ಕೃಷಿ ಚಟುವಟಿಕೆಗಳನ್ನ ಪ್ರಾರಂಭ ಮಾಡಿದ್ದಾರೆ. ಕಳೆದ ವರ್ಷಕ್ಕಿಂತ ಎರಡು ಲಕ್ಷ ಹೆಕ್ಟೇರ್‌ಗಳಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಾಗಿದೆ. ಹೀಗಾಗಿ ಕೂಡಲೇ ಯೂರಿಯಾ ಒದಗಿಸುವಂತೆ ಮನವಿ ಮಾಡಿದ್ದಾರೆ.

    ಕೇಂದ್ರ ಸರ್ಕಾರವು 2025ರ ಖಾರಿಫ್ ಬೆಳೆಗೆ ರಾಜ್ಯಕ್ಕೆ 11,17,000 ಮೆಟ್ರಿಕ್ ಟನ್ ಯೂರಿಯಾ ಹಂಚಿಕೆ ಮಾಡಿದೆ. ಈವರೆಗೆ ಕೇವಲ 5,16,959 ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜು ಮಾಡಲಾಗಿದೆ. ಆದರೆ ಏಪ್ರಿಲ್‌ನಿಂದ ಜುಲೈವರೆಗೆ ರಾಜ್ಯಕ್ಕೆ 6,80,655 ಮೆಟ್ರಿಕ್ ಟನ್ ಯೂರಿಯಾದ ಅವಶ್ಯಕತೆ ಇದೆ. ಕೆಲ ರಸಗೊಬ್ಬರ ಕಂಪನಿಗಳು ಕೇಂದ್ರವು ಮಾಡಿದ ಹಂಚಿಕೆಯ ಪ್ರಕಾರ ಯೂರಿಯಾ ಗೊಬ್ಬರ ಪೂರೈಸಲು ಅಸಮರ್ಥತೆಯನ್ನು ವ್ಯಕ್ತಪಡಿಸಿವೆ ಎಂದು ಹೇಳಿದ್ದಾರೆ.

    ರಾಜ್ಯದಲ್ಲಿ ಯೂರಿಯಾ ಪೂರೈಕೆಯ ತುರ್ತು ಅವಶ್ಯಕತೆಯಿದೆ. ಏಕೆಂದರೆ ಕರ್ನಾಟಕಕ್ಕೆ ಈ ವರ್ಷದ ಆರಂಭದಲ್ಲಿಯೇ ಮಾನ್ಸೂನ್ ಬಂದಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ವಿವಿಧ ಬೆಳೆಗಳ ವ್ಯಾಪ್ತಿಯು ಹೆಚ್ಚಾಗಿದೆ. ತುಂಗಭದ್ರಾ, ಕಾವೇರಿ ಮತ್ತು ಕೃಷ್ಣಾ ನದಿಗಳ ಆಯಕಟ್ಟಿನ ಪ್ರದೇಶಗಳಲ್ಲಿ ನೀರನ್ನು ಮೊದಲೇ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

    13,000 ಹೆಕ್ಟೇರ್ ಖಾರಿಫ್ ಪೂರ್ವ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಯೂರಿಯಾ ಕೊರತೆಯು ರೈತರಲ್ಲಿ ಅಶಾಂತಿ ಆತಂಕವನ್ನು ಸೃಷ್ಟಿಸುತ್ತಿದೆ. ರೈತರ ಹಿತದೃಷ್ಟಿಯಿಂದ ರಾಜ್ಯ ಹಂಚಿಕೆ ಪ್ರಕಾರ ರಸಗೊಬ್ಬರ ಪೂರೈಸಿ. ಬಾಕಿ ಕೊರತೆ ಇರುವ ಯೂರಿಯಾದ ಪೂರೈಕೆಯನ್ನು ತ್ವರಿತಗೊಳಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

    2025ರ ಅಂತ್ಯದೊಳಗೆ 24,000 ಕ್ಕೂ ಹೆಚ್ಚು ಉದ್ಯೋಗ ಕಟ್: ಇಂಟೆಲ್‌ನಿಂದ ನಿರ್ಧಾರ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading