ಮೈಸೂರು: ಟಿ. ನರಸೀಪುರದಲ್ಲಿ ಗಂಭೀರ ವಂಚನೆ ಆರೋಪ ಕೇಳಿಬಂದಿದ್ದು, ಮಾಜಿ ಪುರಸಭೆ ಅಧ್ಯಕ್ಷ ಟಿ.ಎಂ. ನಂಜುಂಡಸ್ವಾಮಿ ಸೇರಿದಂತೆ ಒಟ್ಟು 10 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ನಂಜುಂಡಸ್ವಾಮಿಯನ್ನು ಬಂಧಿಸಿರುವ ಪೊಲೀಸರು ಕೋರ್ಟ್ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಠಾಣೆಗೆ ಕರೆದೊಯ್ದಿದ್ದಾರೆ.
ಇನ್ನು ಜನರಿಂದ ತೆರಿಗೆ ಹಣ ಪಡೆದುಕೊಳ್ಳುತ್ತಿದ್ದ ನಂಜುಂಡಸ್ವಾಮಿ ನಕಲಿ ಬ್ಯಾಂಕ್ ಸೀಲ್ ಬಳಸಿ ರಶೀದಿ ಕೊಟ್ಟು ಹಣ ಹೊಡೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಆತ ಗ್ರಾಮ ಪಂಚಾಯಿತಿ ಅಧ್ಯಕ್ಷನಾದಾಗಿನಿಂದಲೂ ಈ ಕೃತ್ಯ ಎಸಗುತ್ತಾ ಬಂದಿದ್ದು, 1000 ಕ್ಕೂ ಹೆಚ್ಚು ನಕಲಿ ಖಾತೆ ತೆರೆದಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ಈ ಗ್ಯಾಂಗ್ ಸರ್ಕಾರಕ್ಕೆ ಸೇರಬೇಕಿದ್ದ ಸುಮಾರು 40 ಕೋಟಿ ಹಣವನ್ನು ನುಂಗಿ ನೀರು ಕುಡಿದಿದ್ದಾರೆ ಎಂದು ಆರೋಪಿಸಲಾಗಿದೆ.
ದೆಹಲಿಯಲ್ಲಿ ಸಿದ್ದು – ಡಿಕೆಶಿ ಕರ್ತವ್ಯಾಧಿಕಾರಿಗಳ ನಡುವೆ ಬೀದಿ ಜಗಳ; ಡಿಕೆಶಿ ಅಧಿಕಾರಿಯಿಂದ ದೂರು!
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


