Wednesday, September 2, 2026
spot_img
More
    spot_img
    HomeStateDistrictಧರ್ಮಸ್ಥಳ ಸರಣಿ ಕೊಲೆ: ಜುಲೈ 16ರ ಬಳಿಕ ಎಲ್ಲಿಯೂ ಕಾಣಿಸಿಲ್ಲ ದೂರುದಾರ; ಈಗ ಎಲ್ಲಿದ್ದಾನೆ?

    ಧರ್ಮಸ್ಥಳ ಸರಣಿ ಕೊಲೆ: ಜುಲೈ 16ರ ಬಳಿಕ ಎಲ್ಲಿಯೂ ಕಾಣಿಸಿಲ್ಲ ದೂರುದಾರ; ಈಗ ಎಲ್ಲಿದ್ದಾನೆ?

    ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳು ನಡೆದಿವೆ ಎಂಬ ಗಂಭೀರ ಆರೋಪ ಮಾಡಿರುವ ಅನಾಮಧೇಯ ವ್ಯಕ್ತಿಯೊಬ್ಬ ಜುಲೈ 11ರಂದು ದೂರನ್ನೂ ಸಹ ನೀಡಿದ್ದ.

    Advertisement

    ಇನ್ನು ಈ ಕೊಲೆಗಳ ಹೆಣಗಳನ್ನು ತಾನೇ ಹೂತು ಹಾಕಿದ್ದು, ಪಾಪಪ್ರಜ್ಞೆ ಕಾಡುತ್ತಿರುವ ಕಾರಣ ಅವುಗಳ ಅಸ್ತಿಪಂಜರವನ್ನು ಸಮಾಧಿ ಅಗೆದು ತೋರಿಸುವುದಾಗಿ ಹೇಳಿದ್ದ.

    ಇನ್ನು ಜುಲೈ 11ರಂದು ಎಫ್‌ಐಆರ್‌ ದಾಖಲಾದ ಬಳಿಕ ಜುಲೈ 16ರಂದು ಮತ್ತೆ ಧರ್ಮಸ್ಥಳಕ್ಕೆ ಆಗಮಿಸಿದ್ದ ಈತ ಸಮಾಧಿ ತೋರಿಸಲು ಸಿದ್ಧನಿದ್ದ. ಆದರೆ ಅಂದು ಪೊಲೀಸರು ತನಿಖೆ ನಡೆಸದ ಕಾರಣ ಬರಿಗೈನಲ್ಲಿ ವಾಪಸ್‌ ಆಗಿದ್ದ.

    ಬಳಿಕ ರಾಜ್ಯ ಸರ್ಕಾರ ಈ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಇಂದು ( ಜುಲೈ 25 ) ಈ ತಂಡ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಬಂದು ಪ್ರಕರಣವನ್ನು ವರ್ಗಾಯಿಸಿಕೊಂಡ ಬಳಿಕ ನ್ಯಾಯಾಲಯದ ಅನುಮತಿ ಪಡೆದು ದೂರುದಾರನನ್ನು ಭೇಟಿಯಾಗಲಿದೆ.

    ಸದ್ಯ ಎಸ್‌ಐಟಿ ತಂಡಕ್ಕೆ ಆ ಅನಾಮಧೇಯ ದೂರುದಾರ ಇರುವ ಸ್ಥಳ ಪತ್ತೆಯಾಗಿದ್ದು, ಭದ್ರತಾ ದೃಷ್ಟಿಯಿಂದ ಆತ ಕೇರಳದಲ್ಲಿದ್ದಾನೆ ಎನ್ನಲಾಗಿದೆ. ಜುಲೈ 16ರ ಬಳಿಕ ಯಾರ ಕಣ್ಣಿಗೂ ಕಾಣಿಸಿಕೊಳ್ಳದ ಆತ ತನ್ನ ವಕೀಲರ ಸಂಪರ್ಕದಲ್ಲಿದ್ದಾನೆ ಎನ್ನಲಾಗಿದೆ.

    ಟಿ. ನರಸೀಪುರದಲ್ಲಿ ಭಾರೀ ಗೋಲ್‌ಮಾಲ್‌; ಬ್ಯಾಂಕ್‌ ನಕಲಿ ಸೀಲ್‌ ಬಳಸಿ ಜನರ ತೆರಿಗೆ ಹಣ ಗುಳುಂ!

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading