ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಬಾನು ಮುಷ್ತಾಕ್ ಆಯ್ಕೆ ಬಗ್ಗೆ ಬಿಜೆಪಿ ನಾಯಕರಿಂದ ವಿರೋಧ ವಿಚಾರಕ್ಕೆ ಪ್ರತಿಕ್ರಿಯಿಸಿ, ಸರ್ಕಾರಿ ಕಾರ್ಯಕ್ರಮದಲ್ಲಿ ಪೂಜೆ ಮಾಡುವುದು ಇಲ್ಲವೇ ಇಲ್ಲ. ಇದು ಜಾತ್ಯಾತೀತ ವ್ಯವಸ್ಥೆಯಾಗಿದೆ. ಧಾರ್ಮಿಕ ಪೂಜೆಗಳನ್ನು ನಾವು ವೈಯಕ್ತಿಕವಾಗಿ ಮನೆಯಲ್ಲಿ ಮಾಡಿಕೊಳ್ಳುತ್ತೇವೆ. ಸರ್ಕಾರಕ್ಕೆ ಇದೊಂದು ಉತ್ಸವ. ಅವರ ಆಯ್ಕೆ ಬಗ್ಗೆ ನನ್ನ ವಿರೋಧವಿಲ್ಲ ಎಂದು ಹೇಳಿದರು.
ಮುಸ್ಲಿಂ ಮಹಿಳೆಯರಿಗೂ ಸಮಾನ ಹಕ್ಕು ಕೊಡಬೇಕು. ಮಸೀದಿಗಳಿಗೆ ಅವಕಾಶ ಕೊಡಬೇಕು ಎಂದು ಬಾನು ಮುಷ್ತಾಕ್ ಈ ಹಿಂದೆಯೇ ಸಾಮಾಜಿಕ ಬಹಿಷ್ಕಾರವನ್ನೂ ಎದುರಿಸಿದ್ದರು. ಕನ್ನಡ ಭಾಷೆ, ಕನ್ನಡ ಸಾಹಿತ್ಯಕ್ಕಾಗಿ ಅವರು ನೀಡಿರುವ ಕೊಡುಗೆ ಅಪಾರ. ಅವರನ್ನು ರಾಜ್ಯ ಸರ್ಕಾರ ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದು ಸ್ವಾಗತಾರ್ಹ ಎಂದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


