Monday, August 31, 2026
spot_img
More
    spot_img
    HomeLatest newsಯಾವುದೇ ಆದಾಯವಿಲ್ಲದ 34,165 ದೇವಸ್ಥಾನಗಳ ಅಭಿವೃದ್ಧಿಗೆ ವಿಷನ್ ಗ್ರೂಪ್ ರಚಿಸಿದ ರಾಜ್ಯ ಸರ್ಕಾರ

    ಯಾವುದೇ ಆದಾಯವಿಲ್ಲದ 34,165 ದೇವಸ್ಥಾನಗಳ ಅಭಿವೃದ್ಧಿಗೆ ವಿಷನ್ ಗ್ರೂಪ್ ರಚಿಸಿದ ರಾಜ್ಯ ಸರ್ಕಾರ

    ಬೆಂಗಳೂರು: ಯಾವುದೇ ಆದಾಯವಿಲ್ಲದ 34,165 ಸಿ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಪಡಿಸುವ ಸಂಬಂಧ ವಿವಿಧ ಕ್ಷೇತ್ರಗಳಲ್ಲಿನ ಗಣ್ಯರು ಹಾಗೂ ಮುಜರಾಯಿ ಇಲಾಖೆಯ ಪ್ರತಿನಿಧಿಗಳನ್ನೊಳಗೊಂಡ ವಿಷನ್‌ ಗ್ರೂಪ್‌ ರಚಿಸಿ ತಾತ್ವಿಕ ಅನುಮೋದನೆ ನೀಡಲಾಗಿದೆ.

    Advertisement

    ವಿಷನ್‌ ಗ್ರೂಪ್‌ನಲ್ಲಿ ಮಾಜಿ ರಾಜ್ಯಸಭಾ ಸದಸ್ಯರಾದ ಸಿ.ಕೆ.ರಾಮಮೂರ್ತಿ, ಕೆ.ಇ.ರಾಧಾಕೃಷ್ಣ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಡಾ.ಮಹಂತೇಶ್‌ ಬಿರಾದಾರ್‌, ಡಾ.ಶ್ರೀಪಾದ.ಪಿ.ಸಿ ಮತ್ತು ಯತಿರಾಜ್‌ ಸಂಪತ್‌ಕುಮಾರ್‌ ಅವರುಗಳು ಸಮಿತಿಯ ಸದಸ್ಯರಾಗಿದ್ದಾರೆ.ಸಿ ವರ್ಗ ವ್ಯಾಪ್ತಿಗೆ ಬರುವ 34,165 ದೇವಸ್ಥಾನಗಳಲ್ಲಿ ದೇವಾಲಯಗಳ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಸಂದರ್ಭದಲ್ಲಿ ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ವಿಷನ್‌ ಗ್ರೂಪ್‌ ನೀಡಲಿದೆ.

    ದೇವಾಲಯಗಳಿಗೆ ಬರುವ ಭಕ್ತರಿಗೆ ಕಾಲ ಕಾಲಕ್ಕೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ದೇವಾಲಯದ ಪರಂಪರೆಗೆ ಧಕ್ಕೆ ಬಾರದ ರೀತಿಯಲ್ಲಿ ರೂಪಿಸುವುದು, ಸಂಪನೂಲಗಳ ಕ್ರೌಢೀಕರಣ, ದಾನಿಗಳಿಂದ ಸಂಪನೂಲಗಳನ್ನು ಕ್ರೌಡೀಕರಿಸುವುದು, ದೇವಾಲಯಗಳ ಸಂರಕ್ಷಣೆ, ಜೀರ್ಣೋದ್ಧಾರ ಸೇರಿದಂತೆ ಅಗತ್ಯ ರೂಪುರೇಷೆಗಳನ್ನು ರೂಪಿಸಲಿದೆ.

    ದೇವಾಲಯಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸಲಹೆ ನೀಡುವುದು. ದೇವಾಲಯಗಳ ಸಂರಕ್ಷಣೆ, ಸೌಲಭ್ಯಗಳನ್ನು ಕಲ್ಪಿಸಲು ಸಂಪನೂಲ ಸಂಗ್ರಹಣೆ, ಇದಕ್ಕಾಗಿ ದಾನಿಗಳನ್ನು ಸಂಪರ್ಕಿಸುವುದು ಹಾಗೂ ಇಲಾಖೆಯೊಂದಿಗೆ ಸಮನ್ವಯ ಸಾಧಿಸುವುದು ವಿಷನ್‌ ಗ್ರೂಪ್‌ನ ಉದ್ದೇಶವಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading