Friday, August 7, 2026
spot_img
More
    spot_img
    HomeStateಪಕ್ಷಕ್ಕಾಗಿ ಟಿಕೆಟ್‌ ತ್ಯಾಗ ಮಾಡಿದ್ದ ಅಜ್ಜಂಪಿರ್ ಖಾದ್ರಿಗೆ ಕಾಂಗ್ರೆಸ್‌ನಿಂದ ಬಂಪರ್‌ ಕೊಡುಗೆ

    ಪಕ್ಷಕ್ಕಾಗಿ ಟಿಕೆಟ್‌ ತ್ಯಾಗ ಮಾಡಿದ್ದ ಅಜ್ಜಂಪಿರ್ ಖಾದ್ರಿಗೆ ಕಾಂಗ್ರೆಸ್‌ನಿಂದ ಬಂಪರ್‌ ಕೊಡುಗೆ

    ಬೆಂಗಳೂರು: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷಕ್ಕಾಗಿ ಟಿಕೆಟ್ ತ್ಯಾಗ ಮಾಡಿದ್ದ ಅಜ್ಜಂಪಿರ್ ಖಾದ್ರಿಗೆ ಬಂಪರ್ ಕೊಡುಗೆ ನೀಡಿದೆ.

    Advertisement

    ಫಲಿತಾಂಶ ಪ್ರಕಟಗೊಂಡ ಮೂರೇ ದಿನದಲ್ಲಿ ಅಜ್ಜಂಪಿರ್ ಖಾದ್ರಿ ಅವರನ್ನು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ( ಹೆಸ್ಕಾಂ) ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.‌


    ಅಜ್ಜಂಪೀರ್ ಖಾದ್ರಿ ಶಿಗ್ಗಾವಿ ಕ್ಷೇತ್ರದ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ನೀಡಿರಲಿಲ್ಲ.

    ಟಿಕೆಟ್‌ ಗಾಗಿ ಸಾಕಷ್ಟು ಪ್ರಯತ್ನ ನಡೆಸಿದ್ದ ಅಜ್ಜಂಪೀರ್ ಕೊನೆಯ ಗಳಿಗೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಅಲ್ಲದೆ, ಅವರ ಬೆಂಬಲಿಗರು ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

    ಅಜ್ಜಂಪೀರ್ ಖಾದ್ರಿ ಅವರು ಎಂಎಲ್‌ಸಿ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುವ ಭರವಸೆಯನ್ನು ಕೊಟ್ಟ ಮುಖಂಡರು, ಚುನಾವಣೆಯಲ್ಲಿ ಪಠಾಣ್ ಪರವಾಗಿ ಕೆಲಸ ಮಾಡುವಂತೆ ಸೂಚಿಸಿದ್ದರು.

    ಎಂಎಲ್‌ಎ ಟಿಕೆಟ್ ಕೈತಪ್ಪಿದ್ದ ಕಾರಣದಿಂದಾಗಿ ಎಂಎಲ್‌ಸಿ ಸ್ಥಾನದ ಆಕಾಂಕ್ಷಿಯಾಗಿದ್ದ ಖಾದ್ರಿ ಸಚಿವ ಜಮೀರ್ ಅಹ್ಮದ್ ಖಾನ್, ಹಿರಿಯ ಕಾಂಗ್ರೆಸ್ ಮುಸ್ಲಿಂ ಮುಖಂಡ ನಸೀರ್ ಅಹ್ಮದ್ ಸೇರಿದಂತೆ ಹಲವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಇದೀಗ ಚುನಾವಣೆಯ ಗೆಲವಿನ ಬೆನ್ನಲ್ಲೇ ಬೆಂಗಳೂರಿನಲ್ಲಿ ಠೀಕಾಣಿ ಹೂಡಿ ನಾಯಕರ ಮನೆಯಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಖಾದ್ರಿಗೆ ಎಂಎಲ್‌ಸಿ ಸ್ಥಾನದ ಬದಲಾಗಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ. ಈ ಮೂಲಕ ಶಿಗ್ಗಾವಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಆದ ಗೆಲುವಿನ ಹಿನ್ನೆಲೆಯಲ್ಲಿ ಗಿಫ್ಟ್ ಖಾದ್ರಿಗೆ ಸಿಕ್ಕಂತಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading