Saturday, September 19, 2026
spot_img
More
    spot_img
    HomeTop Storyರಾಮಾಯಣ ಚಿತ್ರಕ್ಕಾಗಿ ಯಶ್‌ಗೆ ದಾಖಲೆಗೆ ಸಂಭಾವನೆ: ನಾಯಕ ರಣಬೀರ್‌ ಕಪೂರ್‌ಗಿಂತ ದುಪ್ಪಟ್ಟು!

    ರಾಮಾಯಣ ಚಿತ್ರಕ್ಕಾಗಿ ಯಶ್‌ಗೆ ದಾಖಲೆಗೆ ಸಂಭಾವನೆ: ನಾಯಕ ರಣಬೀರ್‌ ಕಪೂರ್‌ಗಿಂತ ದುಪ್ಪಟ್ಟು!

    ಮುಂಬೈ: ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಖಳನಾಯಕ ಪಾತ್ರಕ್ಕಾಗಿ ಮೊದಲ ಬಾರಿಗೆ ಬರೊಬ್ಬರಿ 200 ಕೋಟಿ ರೂ. ಸಂಭಾವನೆ ಪಡೆಯುವ ಮೂಲಕ ಕನ್ನಡದ ಸ್ಟಾರ್ ನಟ ಯಶ್ ಇದೀಗ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

    Advertisement

    ಇತ್ತೀಚಿನ ದಿನಗಳಲ್ಲಿ ನಟರ ಪಾತ್ರಕ್ಕಿಂತ ವಿಲನ್ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಬಂದಿದೆ. ಅಷ್ಟೇ ಅಲ್ಲ, ನಾಯಕರ ಸಂಭಾವನೆಯೂ ಹೆಚ್ಚಾಗಿರುವುದರಿಂದ ಖಳನಾಯಕರ ಸಂಭಾವನೆಯೂ ಹೆಚ್ಚಿದೆ. ಈಗ ಹೈ-ಬಜೆಟ್ ಚಿತ್ರಗಳಲ್ಲಿ ಮುಖ್ಯವಾಹಿನಿಯ ಹೀರೋಗಳು ವಿಲನ್ ಆಗುವ ಸಂಖ್ಯೆ ಹೆಚ್ಚುತ್ತಿದೆ. ಅವರಲ್ಲಿ ಕನ್ನಡದ ನಟರೊಬ್ಬರು ಚಿತ್ರವೊಂದಕ್ಕೆ 200 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ.

    ಚಿತ್ರರಂಗದಲ್ಲಿ ಸಾಮಾನ್ಯವಾಗಿ ಬಿ-ಟೌನ್ ಮಂದಿಯೇ ಅತಿಹೆಚ್ಚು ಸಂಭಾವನೆ ಪಡೆದುಕೊಳ್ಳುತ್ತಿದ್ದರು. ಬಳಿಕ ದಕ್ಷಿಣದ ಸ್ಟಾರ್ ಗಳಾದ ರಜನಿಕಾಂತ್, ಕಮಲ್ ಹಾಸನ್ ಮತ್ತು ಪ್ರಭಾಸ್ ಸೇರಿದಂತೆ ಹಲವು ನಟರು ದುಪಟ್ಟು ಸಂಭಾವನೆ ಪಡೆಯುತ್ತಿರುವುದು ವರದಿಯಾಗಿದೆ. ಇದೀಗ ಬಾಲಿವುಡ್ ಶಾರುಖ್ ಖಾನ್, ಸಲ್ಮಾನ್, ರಣಬೀರ್ ಕಪೂರ್ ಸೇರಿದಂತೆ ದಕ್ಷಿಣ ನಟರ ಸಂಭಾವನೆಯನ್ನು ಮೀರಿಸಿ ನಮ್ಮ ಕನ್ನಡ ನಟ ಇತಿಹಾಸ ಬರೆದಿದ್ದಾರೆ.

    ಅವರು ಬೇರೆ ಯಾರು ಅಲ್ಲ. ನಮ್ಮ ಚಿತ್ರರಂಗದ ಖ್ಯಾತಿಯನ್ನು ವಿಶ್ವಾದ್ಯಂತ ಪಸರಿಸಿದ ಕೆಜಿಎಫ್ ಖ್ಯಾತಿ ರಾಕಿಂಗ್ ಸ್ಟಾರ್ ಯಶ್ ಬಾಲಿವುಡ್‌ನ ನಿತೇಶ್ ತಿವಾರಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ರಾಮಾಯಣದಲ್ಲಿ ಚಿತ್ರದಲ್ಲಿ ರಾವಣ ಪಾತ್ರ ನಿರ್ವಹಿಸುತ್ತಿದ್ದು, ಈ ಪಾತ್ರಕ್ಕೆ ಬರೊಬ್ಬರಿ 200 ಕೋಟಿ ರೂ. ಸಂಭಾವನೆ(ವಿತರಣೆಯ ಪಾಲು ಮತ್ತು ಸಿನಿಮಾದ ಶುಲ್ಕ) ಇದೆ ಎಂದು ವರದಿಯಾಗಿದೆ. ಅಲ್ಲದೇ, ಈ ಚಿತ್ರದಲ್ಲಿನ ರಾಮನ ಪಾತ್ರಧಾರಿ ರಣಬೀರ್ ಕಪೂರ್ ಗಿಂತ ದುಪ್ಪಟ್ಟು ಎಂದು ಹೇಳಲಾಗುತ್ತಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading