ಬೆಂಗಳೂರು: ಕಳೆದ ಮೂರು ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ನದಿ, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಭಾರೀ ಮಳೆಯಿಂದ ಬಹುತೇಕ ಜಲಾಶಯಗಳು ಭರ್ತಿಯ ಹಂತಕ್ಕೆ ತಲುಪಿವೆ.
ಕೆಆರ್ಎಸ್, ನಾರಾಯಣಪುರ, ಹೇಮಾವತಿ, ವಾಟೆಹೊಳೆ, ಕಬಿನಿ ಸೇರಿದಂತೆ ಮತ್ತಿತರ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಭರ್ತಿಯ ಸನಿಹದಲ್ಲಿವೆ.
ಕೃಷ್ಣಾ, ವೇದಗಂಗಾ ಹಾಗೂ ಹಿರಣ್ಯಕೇಶಿ ನದಿಗಳು ಉಕ್ಕಿ ಹರಿಯುತ್ತಿವೆ. ಕೃಷ್ಣಾ ನದಿಯ ಒಳಹರಿವು ಒಂದೇ ದಿನಕ್ಕೆ 23 ಸಾವಿರ ಕ್ಯೂಸೆಕ್ಸ್ಗೆ ಏರಿಕೆಯಾಗಿದೆ. ಚಿಕ್ಕೋಡಿಯ ಉಪವಿಭಾಗ ವ್ಯಾಪ್ತಿಯಲ್ಲಿ ವಿವಿಧ ಸೇತುವೆಗಳು ಜಲಾವೃತಗೊಂಡಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ.
ಕೆಆರ್ಎಸ್ ಅಣೆಕಟ್ಟಿನಿಂದ ಕಾವೇರಿ ನದಿಗೆ 35 ಸಾವಿರ ಕ್ಯೂಸೆಕ್ಸ್ ನೀರು ಹರಿಬಿಡುತ್ತಿದ್ದು, ನದಿಪಾತ್ರದ ಜನತೆ ಎಚ್ಚರಿಕೆಯಿಂದಿರುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮ ಸೇರಿ ಶ್ರೀರಂಗಪಟ್ಟಣ ತಾಲ್ಲೂಕಿನ ಪ್ರವಾಸಿ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಶೃಂಗೇರಿ-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ-169 ರ ನೆಮಾರು ಸಾಲುಮರ ಬಳಿ ಗುಡ್ಡ ಕುಸಿತಗೊಂಡು ಸಂಚಾರದಲ್ಲಿ ವ್ಯತ್ಯಯವಾಗಿದೆ.
ಹಾಸನ ಜಿಲ್ಲೆ ಸಕಲೇಶಪುರ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಿದ್ಯುತ್ ಕಂಬಗಳ ಮೇಲೆ ಮರಗಳು ಉರುಳಿಬಿದ್ದಿದ್ದು, ಕಳೆದ ನಾಲ್ಕು ದಿನಗಳಿಂದ ಜನರು ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ.
ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಹೇಮಾವತಿ ಜಲಾಶಯದಲ್ಲಿ ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದ್ದು, ಭದ್ರತಾ ದೃಷ್ಟಿಯಿಂದ ಆರು ಕ್ರಸ್ಟ್ ಗೇಟ್ಗಳ ಮೂಲಕ ನೀರನ್ನು ಹೊರಬಿಡಲಾಗುತ್ತಿದೆ.
ನೂತನ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಾತಿಯ ಸುಳಿವು ಬಿಟ್ಟುಕೊಟ್ಟ ವಿಜಯೇಂದ್ರ!
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


