Sunday, September 20, 2026
spot_img
More
    spot_img
    HomeLatest newsಕೆಲ ಪ್ಯಾರಸಿಟಮಲ್ ಔಷಧಿಗಳು ಗುಣಮಟ್ಟದಲ್ಲಿ ವೈಫಲ್ಯವಾಗಿವೆ: ಸಚಿವ ದಿನೇಶ್‌ ಗುಂಡೂರಾವ್‌

    ಕೆಲ ಪ್ಯಾರಸಿಟಮಲ್ ಔಷಧಿಗಳು ಗುಣಮಟ್ಟದಲ್ಲಿ ವೈಫಲ್ಯವಾಗಿವೆ: ಸಚಿವ ದಿನೇಶ್‌ ಗುಂಡೂರಾವ್‌

    ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ ನಡೆಸಿದ ಮಾಸಿಕ ತಪಾಸಣೆಯಲ್ಲಿ ಪ್ಯಾರಸಿಟಮಲ್ ಮಾತ್ರೆಗಳು ಗುಣಮಟ್ಟದಲ್ಲಿ ವೈಫಲ್ಯವಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

    Advertisement

    ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಸಣ್ಣಪುಟ್ಟ ಔಷಧಿಗಳನ್ನು ಮಾತ್ರ ಪರೀಕ್ಷೆಗೊಳಪಡಿಸಲಾಗುತ್ತಿತ್ತು. ಇಲಾಖೆಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಯನ್ನು ನೀಡಿದ್ದು, ಮಾರ್ಗಸೂಚಿಯನುಸಾರ ಎಲ್ಲಾ ಔಷಧಿಗಳನ್ನೂ ತಪಾಸಣೆಗೆ ಒಳಪಡಿಸಲಾಗಿದೆ.

    ಅದರ ಪ್ರಕಾರ, ಪ್ರತೀ ತಿಂಗಳು ಔಷಧಿ, ಕಾಂತಿವರ್ಧಕ ಮತ್ತು ಸೌಂದರ್ಯವರ್ಧಕಗಳನ್ನು ಸ್ಯಾಂಪಲ್ ಪಡೆದು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ ಕುಂಕುಮ ಹಾಗೂ ಪ್ಯಾರಸಿಟಮಲ್ ಔಷಧಿಗಳು ಗುಣಮಟ್ಟದಲ್ಲಿ ವೈಫಲ್ಯವಾಗಿವೆ ಎಂದಿದ್ದಾರೆ.

    ಔಷಧಿಗಳ ನಿಯಮಿತ ಪರಿಶೀಲನೆ ಹಾಗೂ ಗುಣಮಟ್ಟ ವೈಫಲ್ಯವಾದ ಸಂದರ್ಭದಲ್ಲಿ ಔಷಧಿಗಳನ್ನು ಹಿಂಪಡೆಯಲು ಅನುಕೂಲವಾಗುವಂತೆ ವಿಶೇಷವಾದ ನೀತಿಯನ್ನು ರೂಪಿಸಲಾಗುತ್ತಿದೆ. ಅದರ ಪ್ರಕಾರ, ಮುಂದಿನ ದಿನಗಳಲ್ಲಿ ಕಳಪೆ ಮಟ್ಟದ ಔಷಧಿ, ಕಾಂತಿವರ್ಧಕ, ಸೌಂದರ್ಯವರ್ಧಕ ಹಾಗೂ ಆಹಾರ ಉತ್ಪಾದನೆಯಲ್ಲಿ ಬಳಸುವ ರಾಸಾಯನಿಕಗಳ ಗುಣಮಟ್ಟ ಪರಿಶೀಲನೆಗೆ ಒಳಪಡಿಸಿ ಕಳಪೆ ಕಂಡುಬಂದಾಗ ಕ್ರಿಮಿನಲ್ ಕೇಸ್ ದಾಖಲಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಮಾರುಕಟ್ಟೆಯಿಂದ ಸದರಿ ಸರಕನ್ನು ಸಂಪೂರ್ಣವಾಗಿ ಹಿಂಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.

    ಈ ವಿಚಾರವಾಗಿ ರಾಷ್ಟ್ರಮಟ್ಟದಲ್ಲಿ ಕಾನೂನು ರೂಪುಗೊಳ್ಳಬೇಕು. ಅದಕ್ಕಾಗಿ ನಾವು ಕೇಂದ್ರ ಸರ್ಕಾರಕ್ಕೆ ಪತ್ರವನ್ನೂ ಬರೆದಿದ್ದೆ. ಅಲ್ಲಿಂದ ಸರಿಯಾದ ಉತ್ತರ ಬಂದಿಲ್ಲ. ನಮ್ಮ ಸರ್ಕಾರ ನಮ್ಮದೇ ವ್ಯಾಪ್ತಿಯಲ್ಲಿ ಕೈಕಟ್ಟಿ ಕೂರದೇ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ತಿಳಿಸಿದರು.

    ಔಷಧಿ ಗುಣಮಟ್ಟಗಳ ಪರಿಶೀಲನೆಯ ಸಮಗ್ರ ಮಾಹಿತಿಯನ್ನು ವೆಬ್‍ಸೈಟ್‍ನಲ್ಲಿ ಅಳವಡಿಸಲಾಗಿದೆ. ಸಾರ್ವಜನಿಕರು ಸ್ವಯಂ ವೈದ್ಯ ಮಾಡಿಕೊಳ್ಳುವ ಬದಲಾಗಿ ವೈದ್ಯರ ತಪಾಸಣೆಗೊಳಗಾಗಬೇಕು. ವೈದ್ಯಕೀಯ ಶಿಫಾರಸು ಆಧರಿಸಿಯೇ ಔಷಧಿ ತೆಗೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಜನರಿಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತದೆ ಎಂದರು.

    ಪ್ಯಾರಸಿಟಮಲ್ ಸೇರಿದಂತೆ ಯಾವುದೇ ಔಷಧಿಯಾಗಿದ್ದರೂ ಬ್ಯಾಚ್‍ಗಳ ಆಧಾರದ ಮೇಲೆ ಪರಿಶೀಲಿಸಲಾಗುತ್ತದೆ. ಒಟ್ಟಾರೆ ಎಲ್ಲಾ ಔಷಧಿಯೂ ಕಳಪೆ ಎಂದು ಹೇಳಲಾಗುವುದಿಲ್ಲ. ಪರೀಕ್ಷೆಗೊಳಪಟ್ಟ ಔಷಧಿಗಳ ಗುಣಮಟ್ಟವನ್ನು ಮಾತ್ರ ಆಧರಿಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಗುಣಮಟ್ಟದಲ್ಲಿ ವೈಫಲ್ಯಗೊಂಡ ಔಷಧಿಗಳ ಇತರ ಬ್ಯಾಚ್‍ಗಳನ್ನು ಹೆಚ್ಚಿನ ತಪಾಸಣೆಗೊಳಪಡಿಸಲಾಗುತ್ತದೆ. ರಾಜ್ಯ ಸರ್ಕಾರದ ಈ ಕ್ರಮದಿಂದ ಔಷಧಿ ಹಾಗೂ ಇತರ ವಸ್ತುಗಳ ತಯಾರಿಕರ ಜವಾಬ್ದಾರಿ ಹೆಚ್ಚಾಗುತ್ತದೆ. ಸರ್ಕಾರ ನಿಯಮಿತ ಪರಿಶೀಲನೆಗೊಳಪಡಿಸುತ್ತದೆ ಎಂಬ ಕಾರಣಕ್ಕೆ ಗುಣಮಟ್ಟ ಕಾಯ್ದುಕೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದರು.

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ

    ಸಿಎಂ ಸಿದ್ದರಾಮಯ್ಯ ಆಡಳಿತದಲ್ಲಿ ನಿಯಂತ್ರಣ ಕಳೆದುಕೊಂಡಿದ್ದಾರಾ? ಡಿಕೆಶಿ ಹೇಳಿದ್ದಿಷ್ಟು


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading