ಬೆಂಗಳೂರು: ಸದನದಲ್ಲಿ ಆರ್ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುರುವಾರ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಆರ್ಎಸ್ಎಸ್ ಗೀತೆಯನ್ನು ಹಾಡಿ ಗಮನ ಸೆಳೆದಿದ್ದರು.
ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಗೀತೆ ಪಠಿಸಿದ್ದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಕೆಲವರಂತೂ ಡಿಕೆಶಿ ಬಿಜೆಪಿ ಸೇರುವುದು ಪಕ್ಕಾ ಎಂದು ಕಮೆಂಟ್ ಮಾಡುತ್ತಿದ್ದರು.
ಡಿಸಿಎಂ ಡಿಕೆಶಿ ಹಾಡಿಗೆ ಕಾಂಗ್ರೆಸ್ ನಾಯಕರಿಂದ ತೀವ್ರ ವಿರೋಧ ಕೂಡ ವ್ಯಕ್ತವಾಗಿತ್ತು. ನಿನ್ನೆ ಬಿ.ಕೆ.ಹರಿಪ್ರಸಾದ್ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಡಿ.ಕೆ.ಶಿವಕುಮಾರ್ ಅವರು ಕ್ಷಮೆಯಾಚಿಸಿದ್ದಾರೆ.
ಇತ್ತೀಚೆಗೆ ಆರ್ಸಿಬಿ ಕಾರ್ಯಕ್ರಮದಲ್ಲಿ ನಡೆದ ಕಾಲ್ತುಳಿತದ ಕುರಿತಾದ ಚರ್ಚೆಗಳ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿತು. ವಿಪಕ್ಷ ನಾಯಕ ಆರ್.ಅಶೋಕ್ ಈ ಅವಘಡದ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ಶಿವಕುಮಾರ್ ಅವರ ಪಾತ್ರವನ್ನು ನೇರವಾಗಿ ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಡಿಸಿಎಂ ಡಿಕೆಶಿ ಅವರು ವಿಧಾನಸಭೆಯಲ್ಲಿ ಆರ್ಎಸ್ಎಸ್ ಗೀತೆಯನ್ನು ಪಠಿಸುವ ಮೊದಲು ವಿರೋಧ ಪಕ್ಷವು ಹಳೆಯ ವಾದಗಳನ್ನು ಪುನರಾವರ್ತಿಸುತ್ತಿದೆ ಎಂದು ಆರೋಪಿಸಿದರು. ಈ ಘಟನೆಯ 73 ಸೆಕೆಂಡುಗಳ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಬಿಜೆಪಿ ಸದಸ್ಯರ ಸ್ಪಷ್ಟ ಪ್ರತಿಕ್ರಿಯೆಗಳ ನಡುವೆ ಶಿವಕುಮಾರ್ ಅವರ ವಾಚನವನ್ನು ತೋರಿಸುತ್ತದೆ.
ಎಸ್ಐಟಿ ಶೋಧದ ವೇಳೆ ಮನೆಯಲ್ಲಿ ಇರಲಿಲ್ಲ ಮಹೇಶ್ ಶೆಟ್ಟಿ ತಿಮರೋಡಿ
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


