ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗುರುವಾರ ವಿಧಾನಸಭೆಯನ್ನುದ್ದೇಶಿಸಿ ಮಾತನಾಡುವಾಗ ಆರ್ಎಸ್ಎಸ್ (RSS) ಗೀತೆಯನ್ನು ಹಾಡಿದ್ದರು. ವಿಧಾನಸಭೆಯಲ್ಲಿ ನಿಂತು ಸದನವನ್ನು ಉದ್ದೇಶಿಸಿ ಮಾತನಾಡುತ್ತಾ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಗೀತೆ ಪಠಿಸಿದ್ದರು.
ಇದಕ್ಕೆ ಕಾಂಗ್ರೆಸ್ ನಾಯಕರಿಂದ ವಿರೋಧ ವ್ಯಕ್ತವಾದರಿಂದ ಅವರು ಡಿಕೆ ಶಿವಕುಮಾರ್ ಅವರು ಕ್ಷಮೆಯಾಚಿಸುವಂತೆ ಕಾಂಗ್ರೆಸ್ ಎಂಎಲ್ ಸಿ ಬಿಕೆ ಹರಿಪ್ರಸಾದ್ ಆಗ್ರಹಿಸಿದ್ದರು.’RSS’ ಗೀತೆ ಹಾಡಿದ ಡಿ.ಕೆ ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಎಂಲ್ ಸಿ ಬಿ.ಕೆ ಹರಿಪ್ರಸಾದ್ ಆಗ್ರಹಿಸಿದ್ದರು. ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅವರು ಆರ್ ಎಸ್ ಎಸ್ ಗೀತೆ ಹಾಡಿದ್ದು ತಪ್ಪು, ಅದು ಸರಿಯಲ್ಲ. ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು.ಅವರು ಉಪಮುಖ್ಯಮಂತ್ರಿಯಾಗಿ ಹೇಳಿದ್ದರೆ ತಪ್ಪಿಲ್ಲ, ಆದರೆ ಅವರು ಕೆಪಿಸಿಸಿ ಪಕ್ಷದ ಅಧ್ಯಕ್ಷರಾಗಿ ಆರ್ ಎಸ್ ಎಸ್ ಗೀತೆ ಹೇಳಿದ್ದಾರೆ. ಇದು ತಪ್ಪು ಎಂದರು.
ಹಾಗಾಗಿ ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ”ಡಿಕೆ ಶಿವಕುಮಾರ್ ಏನು ಎಂದು ಕಾಂಗ್ರೆಸ್ ಗೆ ಗೊತ್ತಿದೆ. ನನಗೆ ನನ್ನ ಧರ್ಮದ ಬಗ್ಗೆ ಗೌರವವಿದೆ. ಹಿಂದೂ, ಕ್ರೈಸ್ತ, ಮುಸಲ್ಮಾನ ಈ ಮೂರು ಧರ್ಮದ ಬಗ್ಗೆ ನನಗೆ ಗೌರವವಿದೆ. ನಾನು ಹರಿಪ್ರಸಾದ್ ಗೋಸ್ಕರ ಕ್ಷಮೆ ಕೇಳುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


