ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳು ನಡೆದಿವೆ ಎಂದು ದೂರು ನೀಡಿರುವ ಚಿನ್ನಯ್ಯನನ್ನು ಇದೀಗ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದು, ಇಂದು ( ಆಗಸ್ಟ್ 26 ) ಮಹತ್ವದ ಬೆಳವಣಿಗೆಯಲ್ಲಿ ಆತನನ್ನು ಮಹೇಶ್ ತಿಮರೋಡಿ ಮನೆಗೆ ಎಸ್ಐಟಿ ಅಧಿಕಾರಿಗಳು ಕರೆದೊಯ್ದಿದ್ದರು.
ಈ ವೇಳೆ ಮಹೇಶ್ ತಿಮರೋಡಿ ಮನೆಯಲ್ಲಿ ಚಿನ್ನಯ್ಯನ ಮೊಬೈಲ್ ಪತ್ತೆಯಾಗಿದೆ ಎನ್ನಲಾಗಿದ್ದು, ಅದನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ನು ಈ ಸುದ್ದಿ ಹೊರಬಂದ ಬೆನ್ನಲ್ಲೇ ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್ ಹಾಗೂ ಗಿರೀಶ್ ಮಟ್ಟೆಣ್ಣವರ್ ಅವರನ್ನು ಬಂಧಿಸಲಾಗಿದೆ, ಸರ್ಚ್ ವಾರೆಂಟ್ ನೀಡಲಾಗಿದೆ ಎಂಬ ಸುದ್ದಿಗಳು ಸಹ ಹರಿದಾಡಿದವು.
ಈ ಸುದ್ದಿ ಕುರಿತು ಸ್ವತಃ ಸೌಜನ್ಯ ಪರ ಹೋರಾಟಗಾರ ಜಯಂತ್ ಮಾತನಾಡಿದ್ದು ಇದೆಲ್ಲ ಸತ್ಯಕ್ಕೆ ದೂರವಾದದ್ದು ಎಂದಿದ್ದಾರೆ. ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆಯುವ ಮುನ್ನ ಕೋರ್ಟ್ ಅನುಮತಿ ಮೇರೆಗೆ ಆತ ತಿಮರೋಡಿ ಅವರ ಮನೆಯಲ್ಲಿದ್ದ. ಆ ಸಮಯದಲ್ಲಿ ಆತನ ವಸ್ತುಗಳು ಇಲ್ಲಿಯೇ ಉಳಿದುಕೊಂಡಿದ್ದವು. ಅವುಗಳನ್ನು ಸಂಗ್ರಹಿಸಲು ಎಸ್ಐಟಿ ಅಧಿಕಾರಿಗಳು ಬಂದಿದ್ದು, ನಾವೆಲ್ಲ ಅದಕ್ಕೆ ಸಹಕಾರ ನೀಡುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಮೈಸೂರು ದಸರಾ 2025: ಎರಡನೇ ತಂಡದ ಗಜಪಡೆಯ ತೂಕ ಪರೀಕ್ಷೆ; ಯಾರು ಹೆಚ್ಚು?
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


