ನವದೆಹಲಿ: ದೇಶದ ನಾಲ್ಕು ರಾಜ್ಯಗಳಲ್ಲಿ ಖಾಲಿ ಇರುವ ರಾಜ್ಯಸಭೆಯ ಆರು ಸ್ಥಾನಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ.
ಈ ಕುರಿತು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದ್ದು, ಡಿಸೆಂಬರ್.20ರಂದು ಮತದಾನ ನಡೆಯಲಿದೆ.
ಆಂಧ್ರಪ್ರದೇಶದಲ್ಲಿ ಮೂರು, ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಹರಿಯಾಣದಲ್ಲಿ ತಲಾ ಒಂದು ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.
ಈ ಉಪಚುನಾವಣೆಯು ವೈಎಸ್ಆರ್ಸಿಪಿ ಸದಸ್ಯರಾದ ವೆಂಕಟರಮಣ ರಾವ್ ಮೋಪಿದೇವಿ, ಬೀಡಾ ಮಸ್ತಾನ್ ರಾವ್ ಯಾದವ್ ಹಾಗೂ ಆರ್.ಕೃಷ್ಣಯ್ಯ ಅವರು ಆಗಸ್ಟ್ನಲ್ಲಿ ತಮ್ಮ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇನ್ನು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಬಿಜೆಡಿ ಸುಜೀತ್ ಕುಮಾರ್ ಅವರನ್ನು ಉಚ್ಛಾಟನೆ ಮಾಡಿತ್ತು. ಬಳಿಕ ಅವರು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
ತೃಣಮೂಲ ಕಾಂಗ್ರೆಸ್ನ ರಾಜ್ಯಸಭಾ ಸದಸ್ಯ ಜವಾಹರ್ ಸಿರ್ಕಾರ್ ಅವರು ಏಪ್ರಿಲ್ನಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇನ್ನು ಹರಿಯಾಣದಲ್ಲಿ ಬಿಜೆಪಿಯ ಕ್ರಿಶನ್ ಲಾಲ್ ಪನ್ವಾರ್ ಅವರು ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಲ್ಲಿ ಒಂದು ಸ್ಥಾನ ತೆರವಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


