ಭಾರತೀಯ ರಿಸರ್ವ್ ಬ್ಯಾಂಕ್ನ ಗವರ್ನರ್ ಶಕ್ತಿಕಾಂತ್ ದಾಸ್ ಆರೋಗ್ಯದಲ್ಲಿ ಏರುಪೇರಾಗಿದ್ದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಶಕ್ತಿಕಾಂತ್ ಅವರಿಗೆ ಅಸಿಡಿಟಿ ಸಮಸ್ಯೆ ತೀವ್ರಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು ಹಾಗೂ ಮುಂದಿನ ಎರಡು ಮೂರು ಗಂಟೆಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.
1960ರ ಬಳಿಕ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಆಗಿ ಸುದೀರ್ಘ ಸೇವೆ ಸಲ್ಲಿಸಿದ ಖ್ಯಾತಿಯನ್ನು ಹೊಂದಿರುವ ಇವರು ತಮ್ಮ ನಾಯಕತ್ವದಲ್ಲಿ ಹಣದುಬ್ಬರದ ಒತ್ತಡಗಳು ಹಾಗೂ ಇನ್ನಿತರ ಸವಾಲುಗಳನ್ನು ಎದುರಿಸಿದ ಕೀರ್ತಿ ಹೊಂದಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


