144 ವರ್ಷಗಳ ಬಳಿಕ ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭಮೇಳಕ್ಕೆ ನಿನ್ನೆ (ಫೆಬ್ರವರಿ 26) ಅದ್ಧೂರಿಯಾಗಿ ತೆರೆ ಬಿದ್ದಿದೆ. ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಕೊನೆಯ ಪುಣ್ಯಸ್ನಾನಕ್ಕೆ ನಡೆಯಿತು.
ಈ ಪುಣ್ಯಸ್ನಾನದ ಬಳಿಕ ರಾತ್ರಿಯ ವೇಳೆ ಗಂಗಾ ನದಿಯಾಚೆ ಬಾನಂಗಳದಲ್ಲಿ ಬಣ್ಣ ಬಣ್ಣದ ಪಟಾಕಿ ಹಾಗೂ ಲೈಟ್ ಶೋ ಮೂಲಕ ಚಿತ್ತಾರ ಮೂಡಿದವು. ಕುಂಭಮೇಳದಲ್ಲಿ ನೆರೆದಿದ್ದ ಲಕ್ಷಾಂತರ ಭಕ್ತರು ಈ ನಯನ ಮನೋಹರ ದೃಶ್ಯ ಕಂಡು ಶಿವ ಜಪ ಮಾಡುತ್ತಾ ವಿಶ್ವದ ಬೃಹತ್ ಧಾರ್ಮಿಕ ಸಮ್ಮೇಳನಕ್ಕೆ ವಿದಾಯ ಹೇಳಿದರು.
ಈ ಲೈಟ್ಶೋ ಹಾಗೂ ಪಟಾಕಿ ಸಿಡಿಸಿದ್ದರ ವಿಡಿಯೊವನ್ನು ಪ್ರವಾಸಿಗರೊಬ್ಬರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಇನ್ನು ಈ ಬಾರಿಯ ಕುಂಭಮೇಳದಲ್ಲಿ 66.21 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಮಾಹಿತಿ ತಿಳಿಸಿದೆ. ಕಾಲ್ತುಳಿತ, ಸಾರಿಗೆ ವ್ಯವಸ್ಥೆ, ಸ್ವಚ್ಛತೆ ವಿಚಾರಗಳಿಗೆ ಟೀಕೆಗಳನ್ನು ಎದುರಿಸಿದ ಕುಂಭಮೇಳ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


