Thursday, September 3, 2026
spot_img
More
    spot_img
    HomeMahakumbh Mela 2025ಮಹಾಕುಂಭ ಮೇಳ ಸಂಪನ್ನ: ಲೈಟ್‌ಶೋ, ಬಣ್ಣ ಬಣ್ಣದ ಪಟಾಕಿಯೊಂದಿಗೆ ವಿಶ್ವದ ಬೃಹತ್ ಧಾರ್ಮಿಕ ಸಮ್ಮೇಳನಕ್ಕೆ ತೆರೆ;...

    ಮಹಾಕುಂಭ ಮೇಳ ಸಂಪನ್ನ: ಲೈಟ್‌ಶೋ, ಬಣ್ಣ ಬಣ್ಣದ ಪಟಾಕಿಯೊಂದಿಗೆ ವಿಶ್ವದ ಬೃಹತ್ ಧಾರ್ಮಿಕ ಸಮ್ಮೇಳನಕ್ಕೆ ತೆರೆ; ವಿಡಿಯೊ

    144 ವರ್ಷಗಳ ಬಳಿಕ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭಮೇಳಕ್ಕೆ ನಿನ್ನೆ (ಫೆಬ್ರವರಿ 26) ಅದ್ಧೂರಿಯಾಗಿ ತೆರೆ ಬಿದ್ದಿದೆ. ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಕೊನೆಯ ಪುಣ್ಯಸ್ನಾನಕ್ಕೆ ನಡೆಯಿತು.

    Advertisement

    ಈ ಪುಣ್ಯಸ್ನಾನದ ಬಳಿಕ ರಾತ್ರಿಯ ವೇಳೆ ಗಂಗಾ ನದಿಯಾಚೆ ಬಾನಂಗಳದಲ್ಲಿ ಬಣ್ಣ ಬಣ್ಣದ ಪಟಾಕಿ ಹಾಗೂ ಲೈಟ್‌ ಶೋ ಮೂಲಕ ಚಿತ್ತಾರ ಮೂಡಿದವು. ಕುಂಭಮೇಳದಲ್ಲಿ ನೆರೆದಿದ್ದ ಲಕ್ಷಾಂತರ ಭಕ್ತರು ಈ ನಯನ ಮನೋಹರ ದೃಶ್ಯ ಕಂಡು ಶಿವ ಜಪ ಮಾಡುತ್ತಾ ವಿಶ್ವದ ಬೃಹತ್ ಧಾರ್ಮಿಕ ಸಮ್ಮೇಳನಕ್ಕೆ ವಿದಾಯ ಹೇಳಿದರು.

    ಈ ಲೈಟ್‌ಶೋ ಹಾಗೂ ಪಟಾಕಿ ಸಿಡಿಸಿದ್ದರ ವಿಡಿಯೊವನ್ನು ಪ್ರವಾಸಿಗರೊಬ್ಬರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಇನ್ನು ಈ ಬಾರಿಯ ಕುಂಭಮೇಳದಲ್ಲಿ 66.21 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಮಾಹಿತಿ ತಿಳಿಸಿದೆ. ಕಾಲ್ತುಳಿತ, ಸಾರಿಗೆ ವ್ಯವಸ್ಥೆ, ಸ್ವಚ್ಛತೆ ವಿಚಾರಗಳಿಗೆ ಟೀಕೆಗಳನ್ನು ಎದುರಿಸಿದ ಕುಂಭಮೇಳ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading