Friday, September 4, 2026
spot_img
More
    spot_img
    HomeMahakumbh Mela 2025ಏಕತೆಯ ಮಹಾಯಜ್ಞ ಪೂರ್ಣಗೊಂಡಿದೆ: ಕುಂಭಮೇಳದ ಬಗ್ಗೆ ಪ್ರಧಾನಿ ಮೋದಿ ಬಣ್ಣನೆ

    ಏಕತೆಯ ಮಹಾಯಜ್ಞ ಪೂರ್ಣಗೊಂಡಿದೆ: ಕುಂಭಮೇಳದ ಬಗ್ಗೆ ಪ್ರಧಾನಿ ಮೋದಿ ಬಣ್ಣನೆ

    ನವದೆಹಲಿ: ದಾಖಲೆಗಳೊಂದಿಗೆ ತೆರೆ ಕಂಡ ಐತಿಹಾಸಿಕ ಮಹಾಕುಂಭಮೇಳವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ.

    Advertisement

    ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಈ ಏಕತೆಯ ಮಹಾಕುಂಭವನ್ನು ಯಶಸ್ವಿಗೊಳಿಸಲು ದೇಶವಾಸಿಗಳ ಕಠಿಣ ಪರಿಶ್ರಮ, ಪ್ರಯತ್ನಗಳು ಮತ್ತು ದೃಢಸಂಕಲ್ಪದಿಂದ ಪ್ರಭಾವಿತನಾಗಿದ್ದೇನೆ. ಹೀಗಾಗಿ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಮೊದಲನೇಯ ಜ್ಯೋತಿರ್ಲಿಂಗವಾದ ಶ್ರೀ ಸೋಮನಾಥನ ದರ್ಶನಕ್ಕೆ ಹೋಗುತ್ತೇನೆ. ಭಕ್ತಿಯ ಸಂಕೇತವಾಗಿ ಸಂಕಲ್ಪ ಪುಷ್ಪವನ್ನು ಅರ್ಪಿಸುವ ಮೂಲಕ ಪ್ರತಿಯೊಬ್ಬ ಭಾರತೀಯನಿಗಾಗಿ ಪ್ರಾರ್ಥಿಸುತ್ತೇನೆ. ದೇಶವಾಸಿಗಳಲ್ಲಿ ಈ ಏಕತೆಯು ನಿರಂತರವಾಗಿ ಇರಲಿ ಎಂದು ನಾನು ಬಯಸುತ್ತೇನೆ ಎಂದಿದ್ದಾರೆ.

    ಈ ಮಹಾಕುಂಭಮೇಳದಲ್ಲಿ ಸಮಾಜದ ಪ್ರತಿಯೊಂದು ಸ್ಥರದ ಮತ್ತು ಪ್ರತಿಯೊಂದಯ ಕ್ಷೇತ್ರದ ಜನರು ಒಟ್ಟುಗೂಡಿದರು. ಏಕ ಭಾರತ ಶ್ರೇಷ್ಠ ಭಾರತದ ಈ ಅವಿಸ್ಮರಣೀಯ ದೃಶ್ಯವು ಕೋಟ್ಯಾಂತರ ದೇಶವಾಸಿಗಳಲ್ಲಿ ಆತ್ಮವಿಶ್ವಾಸದ ಮಹಾ ಹಬ್ಬವಾಯಿತು ಎಂದು ಪ್ರಧಾನಿ ಮೋದಿ ಕೊಂಡಾಡಿದ್ದಾರೆ.

    ಇನ್ನು ಮಹಾಕುಂಭಮೇಳ ಮುಗಿದ ನಂತರ ನನ್ನ ಮನಸ್ಸಿಗೆ ಬಂದ ಆಲೋಚನೆಗಳನ್ನು ಬರೆಯಲು ಪ್ರಯತ್ನಿಸಿದ್ದೇನೆ ಎಂದು ತಿಳಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading