ತುಮಕೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅವರು ನಿಧನರಾಗಿದ್ದಾರೆ.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಂಜಮ್ಮ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಳೆದ ತಡರಾತ್ರಿ ನಿಧನರಾಗಿದ್ದಾರೆ.
ದೇವಸ್ಥಾನವೊಂದರ ಮುಂದೆ ಹಾಡು ಹಾಡುತ್ತಿದ್ದ ಅಂಧ ಸಹೋದರಿಯರಾದ ಮಂಜಮ್ಮ-ರತ್ನಮ್ಮ ಅವರು, ಸರಿಗಮಪ ಶೋನಲ್ಲಿ ಭಾಗಿಯಾಗಿ ಜನಪ್ರಿಯತೆ ಗಳಿಸಿದ್ದರು.
ಇದೀಗ ಮಂಜಮ್ಮ ನಿಧನರಾಗಿರುವ ಹಿನ್ನೆಲೆಯಲ್ಲಿ ಅಕ್ಕ ರತ್ನಮ್ಮ ಕಂಗಾಲಾಗಿದ್ದಾರೆ.
ಇನ್ನು ಇಬ್ಬರಿಗೂ ಹುಟ್ಟಿನಿಂದ ಕಣ್ಣಿಲ್ಲ. ಸಂಗೀತ ಕಲಿಯದ ಅವರು ಹೊಟ್ಟೆಪಾಡಿಗಾಗಿ ಹಾಡಲು ಆರಂಭಿಸಿದ್ದರು. ಅದೇ ಅವರ ವೃತ್ತಿಯೂ ಆಗಿತ್ತು. ಇದೀಗ ಮಂಜಮ್ಮ ನಿಧನರಾಗಿದ್ದು, ರತ್ನಮ್ಮರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದೆ ಎನ್ನಲಾಗುತ್ತಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


