Tuesday, September 1, 2026
spot_img
More
    spot_img
    HomeLatest newsಮಂಗಳೂರು;ಸಂಚಾರಿ ಪೊಲೀಸ್ ಇನ್‌ಸ್ಪೆಕ್ಟರ್ ಸಿಬ್ಬಂದಿ ಲೋಕಾಯುಕ್ತ ಬಲೆಗೆ

    ಮಂಗಳೂರು;ಸಂಚಾರಿ ಪೊಲೀಸ್ ಇನ್‌ಸ್ಪೆಕ್ಟರ್ ಸಿಬ್ಬಂದಿ ಲೋಕಾಯುಕ್ತ ಬಲೆಗೆ

    ಮಂಗಳೂರು: ಠಾಣೆಯಿಂದ ಸ್ಕೂಟರ್‌ ಬಿಡುಗಡೆಗೊಳಿಸಲು ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ನಗರದ ಉತ್ತರ ಸಂಚಾರ ಪೊಲೀಸ್‌ ಠಾಣೆಯ(North Traffic Police Station) ಇನ್‌ಸ್ಪೆಕ್ಟರ್‌ ಮಹಮ್ಮದ್ ಷರೀಫ್‌ ಹಾಗೂ ಸಿಬ್ಬಂದಿ ಪ್ರವೀಣ್ ನಾಯ್ಕನನ್ನು ಲೋಕಾಯುಕ್ತ(Lokayukta) ಪೊಲೀಸರು ಜನವರಿ 27 ಸೋಮವಾರ ಬಂಧಿಸಿದ್ದಾರೆ.ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಮಹಮ್ಮದ್ ಶರೀಫ್ ಕೆ. ಮತ್ತು ಪೊಲೀಸ್ ಸಿಬ್ಬಂದಿ ಪ್ರವೀಣ್ ಎಂಬುವವರೇ ಲೋಕಾಯುಕ್ತ ಬಲೆಗೆ ಬಿದ್ದವರು.ವ್ಯಕ್ತಿಯೊಬ್ಬರು ಸ್ಕೂಟರ್ ಅನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆಗೊಳಿಸಲು ನ್ಯಾಯಾಲಯದಿಂದ ಆದೇಶವಾಗಿದ್ದು, ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮುಹಮ್ಮದ್ ಶರೀಫ್ ರವರನ್ನು ಭೇಟಿ ಮಾಡಿದಾಗ ರೂ. 5000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ವ್ಯಕ್ತಿ ಕಡಿಮೆ ಮಾಡಿ ಎಂದಾಗ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ರವರು ಠಾಣಾ ರೈಟರ್ ನಾಗರತ್ನ ರವರನ್ನು ಭೇಟಿ ಮಾಡಲು ತಿಳಿಸಿದ್ದಾರೆ.ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ಮತ್ತು ಠಾಣಾ ಬರಹಗಾರರಾದ ನಾಗರತ್ನ ವಿರುದ್ಧ ಪ್ರಕರಣ ದಾಖಲಾಗಿತ್ತು.

    Advertisement

    ಸೋಮವಾರ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ಕೆ. ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ 3000 ರೂ. ಲಂಚದ ಹಣವನ್ನು ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.ಲೋಕಾಯುಕ್ತ ಮಂಗಳೂರಿನ ಪೊಲೀಸ್ ಅಧೀಕ್ಷಕರು(in charge)) ಡಾ.ನಂದಿನಿ ಬಿ.ಎನ್. ನೇತೃತ್ವದಲ್ಲಿ ತನಿಖಾ ಕಾರ್ಯಾಚರಣೆ ನಡೆದಿದೆ. ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆ ಪೊಲೀಸ್ ಉಪಾಧೀಕ್ಷಕರಾದ ಡಾ.ಗಾನ ಪಿ.ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ ಎ., ಚಂದ್ರಶೇಖರ್ ಕೆ.ಎನ್. ಮತ್ತು ಉಡುಪಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ, ಮಂಗಳೂರು ಮತ್ತು ಉಡುಪಿ ಪೊಲೀಸ್ ಠಾಣೆ ಸಿಬ್ಬಂದಿ ತನಿಖಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ಲೋಕಾಯುಕ್ತ ಪ್ರಕಟಣೆ ತಿಳಿಸಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading