ಹೊಸದಿಲ್ಲಿ: ಕೇಂದ್ರ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಅವರ ಬಹು ದಿನಗಳ ಬೇಡಿಕೆಯಾದ 8ನೇ ವೇತನ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದೆ.
ನವೆಂಬರ್ 18ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದ್ದು, ದೀಪಾವಳಿ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ನಿರ್ಣಯ ಕೈಗೊಂಡಿರುವುದು ದೇಶದಾದ್ಯಂತ ಇರುವ 50 ಲಕ್ಷಕ್ಕೂ ಹೆಚ್ಚಿನ ನೌಕರರು ಹಾಗೂ ಪಿಂಚಣಿದಾರರಲ್ಲಿ ಸಂಭ್ರಮ ಮನೆಮಾಡಿದೆ.
ಕೇಂದ್ರ ಸಚಿವ ಸಂಪುಟ ಸಭೆಯ ಬಳಿಕ ಈ ಕುರಿತು ಮಾಹಿತಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರ ನೇತೃತ್ವದಲ್ಲಿ ಪ್ರಾಧ್ಯಾಪಕ ಪುಲಕ್ ಘೋಷ್ ಮತ್ತು ಪಂಕಜ್ ಜೈನ್ ಸೇರಿದಂತೆ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿ ನೌಕರರ ವೇತನ ರಚನೆ ಹಾಗೂ ಇತರೆ ಭತ್ಯೆಗಳನ್ನು ನಿರ್ಧರಿಸಲಿದೆ, ನವೆಂಬರ್ 18ರೊಳಗೆ ವರದಿ ಸಲ್ಲಿಸಲಿದೆ ಎಂದರು.
ಇನ್ನು ಈ ವೇತನ ಆಯೋಗದ ಪ್ರಮುಖ ಗುರಿ ಕೇವಲ ವೇತನ ಹೆಚ್ಚಳ ಮಾತ್ರವಲ್ಲ, ನೌಕರರ ಜೀವನಮಟ್ಟವನ್ನು ಸುಧಾರಿಸಲು ಕೇಂದ್ರೀಕೃತವಾಗಿರಲಿದೆ. ಅಲ್ಲದೇ ದೇಶದ ಆರ್ಥಿಕ ಸ್ಥಿತಿ, ಹಣದುಬ್ಬರದ ಪರಿಣಾಮ, ಕೊಡುಗೆ ರಹಿತ ಪಿಂಚಣಿದಾರರ ಹೊರೆ, ರಾಜ್ಯಗಳ ಆರ್ಥಿಕ ಆಯೋಗದ ಮೇಲೆ ಪರಿಣಾಮ, ಕೇಂದ್ರ, ಸಾರ್ವಜನಿಕ ಮತ್ತು ಖಾಸಗಿ ವಲಯಗಳ ವೇತನದ ಹೋಲಿಕೆ ಅಂಶಗಳನ್ನು ಪರಿಗಣಿಸಿ ಆಯೋಗ ವರದಿಯನ್ನು ಸಿದ್ಧಪಡಿಸಲಿದೆ.
ನನ್ನ ಅರ್ಹತೆ ಏನಿದ್ದರೂ ಕೆಪಿಸಿಸಿ ಕಚೇರಿಯಲ್ಲಿ ಕಸ ಗುಡಿಸುವುದಷ್ಟೇ ಎಂದ ಪ್ರದೀಪ್ ಈಶ್ವರ್
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


