ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದು, ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಸುಳಿವು ನೀಡಿದ್ದಾರೆ.
ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸಂಪುಟ ಪುನರ್ ರಚನೆ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗುತ್ತಿದ್ದಾರೆ. ಹೈಕಮಾಂಡ್ ನಾಯಕರ ಬಗ್ಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ಸಿಎಂ, ಡಿಸಿಎಂ, ಹೈಕಮಾಂಡ್ ಈ ಬಗ್ಗೆ ಸೂಕ್ತ ತೀರ್ಮಾನ ಮಾಡುತ್ತಾರೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಮಾತುಗಳು ಇವೆ. ಡಿಕೆಶಿ ಒಳ್ಳೆಯ ಕೆಲಸ ಮಾಡಿ ಪಕ್ಷ ಕಟ್ಟಿ ಬೆಳೆಸಿದ್ದಾರೆ. ಆದರೆ ಅವರ ಅವಧಿ 5 ವರ್ಷಕ್ಕಿಂತ ಹೆಚ್ಚಾಗಿದೆ. ಆದರೆ ಯಾರಿಗಾದರೂ ಪೂರ್ತಿ ಅವಧಿಗೆ ಅಧ್ಯಕ್ಷ ಸ್ಥಾನ ಕೊಡೋದು ತಪ್ಪಲ್ಲ. ಅದು ಯಾವ ರೀತಿ ತೀರ್ಮಾನ ಆಗುತ್ತದೆ ನೋಡೋಣ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು ಎಂದು ಪರೋಕ್ಷವಾಗಿ ಹೇಳಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


