ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷ ಹಾಗೂ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಇದನ್ನು ನಾನು ನಿನ್ನೆಯೂ ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಯಾರೂ ಕೂಡ ವದಂತಿಗಳಿಗೆ ಕಿವಿಗೊಡಬೇಡಿ. ನಾವು ಕೊಟ್ಟಿರುವ ಮಾತುಗಳನ್ನು ಉಳಿಸಿಕೊಳ್ಳಬೇಕು. ಆದ್ದರಿಂದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ. ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಜನ ನಮ್ಮನ್ನು ನಂಬಿ ಮತ ಹಾಕಿ ಗೆಲ್ಲಿಸಿದ್ದಾರೆ. ಆದ್ದರಿಂದ ನಾವು ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸ್ಪಷ್ಟನೆ ನೀಡಿದರು.
ಇನ್ನು ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿಲ್ಲ. ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ಹೆಚ್ಚುವರಿ ಖರ್ಚಾಗಿದೆ. ಮುಂದಿನ ವರ್ಷಕ್ಕೆ ಗ್ಯಾರಂಟಿ ಯೋಜನೆಗಳಿಗೆ ಕೊಟ್ಟರೂ ಹಣ ದೊರೆಕುತ್ತದೆ. ವಿಪಕ್ಷಗಳ ಟೀಕೆಗೆ ನಾನು ಉತ್ತರ ಕೊಡಲ್ಲ ಎಂದು ವಿಪಕ್ಷಗಳ ವಿರುದ್ಧ ಕಿಡಿಕಾರಿದರು.
ಇನ್ನು ಕೇಂದ್ರ ಸರ್ಕಾರ ನಮಗೆ ನೀಡುತ್ತಿರುವ ಹಣವನ್ನು ಸರಿಯಾಗಿ ನೀಡುತ್ತಿಲ್ಲ. ಒತ್ತಾಯ ಮಾಡಿ ಹಣ ತಂದು, ಸಂಪನ್ಮೂಲ ಕ್ರೋಢೀಕರಣ ಜಾಸ್ತಿ ಮಾಡಲಾಗಿದೆ ಎಂದು ತಿಳಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


